Mysore
21
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

ವರುಣನ ಆರ್ಭಟ ; ಹಾಸನಾಂಬೆ ದೇವಾಲಯದಲ್ಲಿ ಭಕ್ತಾದಿಗಳ ಸಂಖ್ಯೆ ಇಳಿಕೆ

ಹಾಸನ ; ಹಾಸನಾಂಬ ದೇವಾಲಯದ ಬಾಗಿಲು ತೆರಯಲಾಗಿದ್ದು, ವಿಶೇಷ ಪೂಜೆ ಸಲ್ಲಿಸಿದ ಬಳಿಕ ಭಕ್ತಾದಿಗಳಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಆದರೆ ರಾತ್ರಿಯಿಂದ ಮುಂಜಾನೆವರೆಗೆ ಸುರಿದ ಭಾರೀ ಮಳೆಗೆ ಭಕ್ತರು ವಾಪಾಸು ತೆರಳಿದ ಘಟನೆ ನಡದದಿದೆ. ಭಕ್ತಾಧಿಗಳ ಸಂಖ್ಯೆಯಲ್ಲಿ ಇದರಿಂದಾಗಿ ಗಣನೀಯ ಇಳಿಕೆ ಕಂಡಿದೆ.

ಪ್ರತಿ ವರ್ಷದಂತೆ ಈ ವರ್ಷವು ವಿಧಿ ವಿಧಾನದೊಂದಿಗೆ ನೆನ್ನೆ ಪೂಜೆ ಸಲ್ಲಿಸಿ ಜಿಲ್ಲಾಡಳಿತದ ಸಮ್ಮುಖದಲ್ಲಿ ಬಾಗಿಲು ತೆರೆದಿದ್ದರಿಂದ ಹಾಸನದ ಆದಿ ದೇವತೆ ಹಾಸನಾಂಬೆ ಭಕ್ತರಿಗೆ ವಿಶ್ವರೂಪ ದರ್ಶನವನ್ನು ಕರಣಿಸಿದಳು. ಮೊಟ್ಟ ಮೊದಲ ಬಾರಿಗೆ ಅಚ್ಚುಕಟ್ಟಾಗಿ ಈ ಬಾರಿ ದರ್ಶನದ ವ್ಯವಸ್ಥೆಯನ್ನು ಜಿಲ್ಲಾಡಳಿತ ಮತ್ತು ಧಾರ್ಮಿಕ ದತ್ತಿ ಇಲಾಖೆ ಮಾಡಿದ್ದು ಈ ಬಾರಿ ದರ್ಶನಕ್ಕೆ ಬರುವ ಭಕ್ತಾದಿಗಳಿಗೆ ಅನೇಕ ಸೌಕರ್ಯಗಳನ್ನು ಒದಗಿಸಿದೆ.

ಪ್ರತಿ ಬಾರಿಯೂ ಹಾಸನಂಬ ದರ್ಶನ ಸಂದರ್ಭದಲ್ಲಿ ಮಳೆಯಾಗುವುದು ಪ್ರತೀತ. ಆದರೆ ಮೊದಲ ಬಾರಿಗೆ ಪ್ರಾರಂಭದ ದಿನವೇ ವರುಣನ ಆರ್ಭಟ ಹೆಚ್ಚಾಗಿದ್ದರಿಂದ ರಾತ್ರಿ ದರ್ಶನಕ್ಕೆ ಬಂದಂತಹ ಭಕ್ತಾದಿಗಳಿಗೆ ತೊಂದರೆ ಉಂಟಾಯಿತು. ರಾತ್ರಿ ಸುಮಾರು ಒಂಬತ್ತು ಗಂಟೆಗೆ ಆಗಮಿಸಿದ ವರುಣ ಇಂದು ಮುಂಜಾನೆಯ ತನಕ ಸುರಿದುದ್ದರಿಂದ ದರ್ಶನಕ್ಕೆ ಅಡ್ಡಿ ಉಂಟು ಮಾಡಿದ್ದು, ಭಕ್ತಾದಿಗಳ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಕೆ ಕಂಡು ಬಂತು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!