Mysore
21
broken clouds

Social Media

ಭಾನುವಾರ, 14 ಜೂನ್ 2026
Light
Dark

ಮಹಿಳೆಯರು ಆರ್ಥಿಕ ಸ್ವಾವಲಂಬಿಳಾಗುವ ಮೂಲಕ ದೇಶದ ಅಭಿವೃದ್ಧಿಗೆ ಸಹಕರಿಸಬೇಕು : ಜನದ್ವನಿ ಬಿ. ವೆಂಕಟೇಶ್

ಹನೂರು: ಮಹಿಳೆಯರು ಆರ್ಥಿಕ ಸ್ವಾವಲಂಬಿಯಾಗುವ ಮೂಲಕ ದೇಶದ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಜಿಲ್ಲಾ ಬಿಜೆಪಿ ಒಬಿಸಿ ಜಿಲ್ಲಾ ಸಂಯೋಜಕ ಜನದ್ವನಿ ಬಿ ವೆಂಕಟೇಶ್ ತಿಳಿಸಿದರು.

ಪಟ್ಟಣದ ಆರ್.ಎಸ್. ದೊಡ್ಡಿಯ ವೆಂಕಟೇಶ್ ರವರ ಕಚೇರಿ ಮುಂಭಾಗ ಕುರುವಿಲ್ ಕ್ರಿಯೇಷನ್ ವತಿಯಿಂದ ಆಯೋಜಿಸಿದ್ದ ಮಹಿಳಾ ಸ್ವಯಂ ಉದ್ಯೋಗ ಕಲ್ಪಿಸುವ ಅರಿವು ಮತ್ತು ಚಿಂತನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಹಿಳೆಯರು ಆರ್ಥಿಕ ಸ್ವಾವಲಂಬಿಯಾಗಬೇಕು ಎಂಬ ಉದ್ದೇಶದಿಂದ ಹನೂರು ಭಾಗದ ಮಹಿಳೆಯರಿಗೆ ಕರಕುಶಲ ವಸ್ತುಗಳ ತಯಾರಿ ಮತ್ತು ಮಾರುಕಟ್ಟೆ ಮಾಡುವ ಬಗ್ಗೆ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ. ಇದಕ್ಕೆ ನಿಮ್ಮ ಸಮಯ ಮತ್ತು ಶ್ರಮ ಜೊತೆಗೆ ಇಚ್ಛಾಶಕ್ತಿ ಅಗತ್ಯವಿದೆ.ಪ್ರಕೃತಿಗೆ ಅನುಗುಣವಾಗಿ ಆರ್ಥಿಕ ಅಭಿವೃದ್ಧಿ ಮಾಡಿಕೊಳ್ಳಲು ನರೇಂದ್ರ ಮೋದಿಯವರ ಕಾರ್ಯಕ್ರಮಗಳು ಸಹಕಾರಿಯಾಗಿದೆ. ಭಾರತೀಯ ಮಹಿಳಾ ಬ್ಯಾಂಕ್ ಮತ್ತು ಮುದ್ರಾ ಯೋಜನೆಯಲ್ಲಿ ಶಿಶು ಸಾಲ ಯೋಜನೆ ಅಡಿ ಸಣ್ಣ ಕೈಗಾರಿಕೆಗಳ ಅಭಿವೃದ್ಧಿಗೆ 50,000 ಸಾಲ ನೀಡುತ್ತಾರೆ. ಇಂತಹ ಯೋಜನೆಗಳನ್ನು ಬಳಸಿಕೊಂಡು ಮಹಿಳೆಯರು ಆರ್ಥಿಕ ಸ್ವಾವಲಂಬಿಯಾಗಬೇಕು ಎಂದು ತಿಳಿಸಿದರು.
ಕುರುವಿಲ್ ಸಂಸ್ಥೆಯ ಪಿ.ಎಂ ಕುಮಾರ್ ಅವರು ಕರಕುಶಲ ಉತ್ಪನ್ನಗಳಾದ ತಾಂಬೂಲ ಬ್ಯಾಗ್. ಗಿಫ್ಟ್ ಬಾಕ್ಸ್, ಜುವೆಲ್ಲರಿ ಬಾಕ್ಸ್, ಹ್ಯಾಂಡ್ ಕಾಪ್ಟ್, ಕಾಲಂಕರಿ ಬ್ಯಾಗ್, ಯೋಗ ಮ್ಯಾಟ್. ತಯಾರಿಕೆ ಮತ್ತು ಬಳಕೆ ವಿಧಾನಗಳ ಬಗ್ಗೆ ತಿಳಿಸಿಕೊಟ್ಟರು.
ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸುಧಾ ಮಲ್ಲಣ್ಣ, ಮಹದೇಶ್ವರ ಮಂಡಲ ಮಹಿಳಾ ಅಧ್ಯಕ್ಷೆ ಮೀನಾ, ಜಿಲ್ಲಾ ಮಹಿಳಾ ಪ್ರಭಾರಿ ಮಂಗಳಮ್ಮ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಜಯಶೀಲ, ಪ್ರಿಯದರ್ಶಿನಿ ಕೃಷ್ಣ ರಾಜೇಶ್ವರಿ ಅಂಬಿಕಾ ಮತ್ತು ರಾಮಾಪುರ ಕೌದಳ್ಳಿ ಹೂಗ್ಯಂ ಭಾಗದ ಮಹಿಳೆಯರು ಹಾಜರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!