Mysore
22
overcast clouds

Social Media

ಭಾನುವಾರ, 14 ಜೂನ್ 2026
Light
Dark

ಕೊಡಗು : ಅ.18 ರಿಂದ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ 

ಮಡಿಕೇರಿ: ಮೈಸೂರಿನ ಎಟಿಎಂಇ ಇಂಜಿನಿಯರಿಂಗ್ ಕಾಲೇಜು ಸಿದ್ಧಪಡಿಸಿರುವ ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅನುಮೋದಿತ ಗ್ರಾಮೀಣಾಭಿವೃದ್ಧಿ ಯೋಜನೆಯ  ಅಂಗವಾಗಿ ಕುಶಾಲನಗರದ ಕೆಎಂಟಿ ಆಂಗ್ಲ ವಾಧ್ಯಮ ಶಾಲೆಯ ಸಹಯೊಗದೊoದಿಗೆ ವಿಸ್ಡಂ ಪಿಯು ಕಾಲೇಜಿನಲ್ಲಿ ಅ.೧೮ ರಿಂದ ೨೦ರವರೆಗೆ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ ಎಂದು ಕಾಲೇಜಿನ ಆಡಳಿತ ಅಧಿಕಾರಿ ಡಾ.ಸಚ್ಚಿದಾನಂದ ಮೂರ್ತಿ ತಿಳಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ವಾತನಾಡಿದ ಅವರು, ಮೈಸೂರು, ಚಾಮರಾಜನಗರ, ಕೊಡಗು ಮತ್ತು ಮಂಡ್ಯ ಜಿಲ್ಲೆಗಳ ಗ್ರಾಮೀಣ ಪ್ರದೇಶದ ೭ರಿಂದ ೧೨ನೇ ತರಗತಿಯವರೆಗಿನ ವಿದ್ಯಾರ್ಥಿಗಳಲ್ಲಿ ವಿಜ್ಞಾನ ವಿಷಯಕ್ಕೆ ಸಂಬಂಧಿಸಿದ ಕೌಶಲ ಅಭಿವೃದ್ಧಿ ಮತ್ತು ವೈಜ್ಞಾನಿಕ ಸಂಶೋಧನೆಯ ಬಗ್ಗೆ ಆಸಕ್ತಿ ಬೆಳೆಸಲು ‘ಸೈನ್ಸ್ ಫಿೆುಂಸ್ಟಾ ಫಾರ್ ಸ್ಟೂಡೆಂಟ್ಸ್‌‘ ಎಂಬ ವಿಷುಂದ ಕುರಿತು ವಿವಿಧ ಸ್ಪರ್ಧಾತ್ಮಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ. ಅ.೧೮ ರಂದು ಬೆಳಿಗ್ಗೆ ೧೦ ರಿಂದ ಮಧ್ಯಾಹ್ನ ೩ ರವರೆಗೆ ವಿಜ್ಞಾನ ವಿಷುಂಕ್ಕೆ ಸಂಬಂಧಿಸಿದಂತ ಪ್ರಬಂಧ ಸ್ಪರ್ಧೆ, ‘ಆಶುಭಾಷಣ ಸ್ಪರ್ಧೆ ಮತ್ತು ಭಿತ್ತಿಪತ್ರ ಪ್ರದರ್ಶನ’’ ನಡೆಯಲಿದೆ. ಅ.೧೯ ರಂದು ಬೆಳಿಗ್ಗೆ ೯.೩೦ ರಿಂದ ಮಧ್ಯಾಹ್ನ ೩ ಗಂಟೆವರೆಗೆ ‘‘ಹ್ಯಾಕಾಥಾನ್’ ಮತ್ತು ‘ವಿಜ್ಞಾನ ರಸಪ್ರಶ್ನೆ’ ಸ್ಪರ್ಧೆ ನಡೆಯ ಲಿದ್ದು, ಅ ೨೦ ರಂದು ೯.೩೦ ರಿಂದ ೧.೩೦ ರವರೆಗೆ ವಿವಿಧ ತಾಂತ್ರಿಕ ಯೋಜನೆ  ಪ್ರದರ್ಶನ ಸ್ಪರ್ಧೆ ನಡೆುಯಲಿದೆ ಎಂದು ತಿಳಿಸಿದರು.
ವಿಜೇತರಾದ ಸ್ಪರ್ಧಿಗಳಿಗೆ ನಗದು ಬಹುವಾನ, ಪ್ರಶಸ್ತಿ ಪತ್ರ ಹಾಗೂ ಭಾಗವಹಿಸಿದ ಎಲ್ಲರಿಗೂ ಪ್ರವಾಣ ಪತ್ರ ವಿತರಿಸಲಾಗುವುದು. ಕೊಡಗು ಜಿಲ್ಲೆಯ ವಿವಿಧ ತಾಲೂಕುಗಳಿಂದ ೭-೧೨ನೇ ತರಗತಿಯವರೆಗಿನ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಎಲ್ಲಾ ಸ್ಪರ್ಧಾತ್ಮಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬಹುದು. ಆಸಕ್ತ ಸ್ಪರ್ಧಿಗಳು ಮುಂಚಿತವಾಗಿ  ತಮ್ಮ ಹೆಸರುಗಳನ್ನು ನೊಂದಾಯಿಸಿಕೊಳ್ಳಬಹುದು. ಹೆಚ್ಚಿನ ವಾಹಿತಿಗಾಗಿ ದೂ: ೯೯೦೨೨೩೮೭೬೮, ೯೭೩೯೩೧೯೫೬೭ ಅವರನ್ನು ಸಂಪರ್ಕಿಸಬಹುದು ಎಂದು ತಿಳಿಸಿದರು.

ಯೋಜನೆ ಅನುಷ್ಠಾನ ಸಂಯೋಜಕ ಡಾ.ಎಲ್.ಯತೀಶ್, ಪ್ರೋ.ಕೆ.ಎಸ್.ಗುರುಪ್ರಸಾದ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!