ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಸಂಖ್ಯಾಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕ ಡಾ.ವಿಷ್ಣು ಹೆಬ್ಬಾರ್ (76) ಶನಿವಾರ
ಅನಾರೋಗ್ಯದಿಂದ ಟಿ.ಕೆ.ಲೇಔಟ್ ನ ತಮ್ಮ ಮನೆಯಲ್ಲಿ
ನಿಧನರಾದರು.
ಅವರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ. ನಗರದಲ್ಲಿರುವ ಚಿತ್ಪಾವನ ಬ್ರಾಹ್ಮಣರ ಸಂಘದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.
ಅವರ ಅಂತ್ಯಕ್ರಿಯೆ ಇಂದು ಒಂಬತ್ತು ಗಂಟೆಯ ನಂತರ ನಗರದ ಚಾಮುಂಡಿ ಬೆಟ್ಟದ ತಪ್ಪಲಿನ ಚಿತಾಗಾರದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.