Mysore
24
overcast clouds

Social Media

ಬುಧವಾರ, 01 ಜುಲೈ 2026
Light
Dark

ಗಾಯಾಳುಗಳು ತ್ವರಿತವಾಗಿ ಆಸ್ಪತ್ರೆಗೆ ತೆರಳಲು ನೆರವಾದ ಶಿಕ್ಷಣ ಸಚಿವರು

ಮಂಡ್ಯ : ಮಂಡ್ಯ ಜಿಲ್ಲೆ ಕೆ.ಆರ್. ಪೇಟೆ ತಾಲೂಕಿನ ತ್ರಿವೇಣಿ ಸಂಗಮದಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳ ಕಾರ್ಯಕ್ರಮದಿಂದ ವಾಪಸ್ ಹೋಗುವಾಗ ರಸ್ತೆ ಅಪಘಾತದಲ್ಲಿ ಇಬ್ಬರು ಬಾಲಕರು ಗಾಯಗೊಂಡಿದ್ದು, ಆಸ್ಪತ್ರೆಗೆ ತೆರಳಲು ಆಂಬ್ಯುಲೆನ್ಸ್‌‌ಗಾಗಿ ಕಾಯುತ್ತಿದ್ದರು.

ಅದೇ ಮಾರ್ಗದಲ್ಲಿ ತೆರಳುತ್ತಿದ್ದ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವರಾರ ಬಿ.ಸಿ. ನಾಗೇಶ್ ಅವರು, ತಮ್ಮ ಭದ್ರತೆ ಕರ್ತವ್ಯದಲ್ಲಿದ್ದ ಪೊಲೀಸ್ ಎಸ್ಕಾರ್ಟ್ ವಾಹನದಲ್ಲಿ ಗಾಯಾಳು ಬಾಲಕರನ್ನು ಬೇಗ ಆಸ್ಪತ್ರೆಗೆ ಕರೆದೊಯ್ಯಲು ನೆರವಾದರು.

ಮಾರ್ಗ ಮಧ್ಯೆ ಆಂಬ್ಯುಲೆನ್ಸ್ ಬಂದ ಬಳಿಕ ಇಬ್ಬರು ಬಾಲಕರನ್ನು ಆಸ್ಪತ್ರೆಗೆ ಕಳುಹಿಸಿ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!