ಹನೂರು: ಪಿ ಜಿ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾವತ್ತೂರಿನಿಂದ ಆದಿವಾಸಿ ಪೋಡುಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಮಳೆಯ ನೀರಿಗೆ ಕೊಚ್ಚಿ ಹೋಗಿರುವುದರಿಂದ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸರಿಪಡಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ತಾಲ್ಲೂಕಿನ ಪಿ ಜಿ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ನೆಲ್ಲಿಕತ್ರಿ, ಕೆರೆದಿಂಬ, ಗೊಂಬೆಗಲ್ಲು ಕಡಕಲಕಂಡಿ, ಹೊನ್ನ ಮೇಟಿ, ಅತ್ತಿಖಾನೆ ಪೋಡುಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಕಳೆದ 1ವಾರದಿಂದ ಬೀಳುತ್ತಿರುವ ಸತತ ಮಳೆಗೆ ಕೊಚ್ಚಿ ಹೋಗಿರುವುದರಿಂದ ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗಿದೆ.
ರಸ್ತೆ ಮಳೆಯ ನೀರಿಗೆ ಕೊಚ್ಚಿ ಹೋಗಿರುವುದರಿಂದ ಪಾದಚಾರಿಗಳಿಗೂ ಸಹ ಸಂಚರಿಸಲು ಕಷ್ಟವಾಗಿದೆ.ಯಾವುದಾದರೂ ಘಟನೆಗಳು ಜರುಗಿದರೆ ಡೋಲಿ ಕಟ್ಟಿಕೊಂಡು ಬರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಇತ್ತ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಇಲ್ಲದಿದ್ದರೆ ಪ್ರತಿಭಟನೆ ನಡೆಸುವುದಾಗಿ ನೆಲ್ಲಿಕತ್ರಿ ಗ್ರಾಮಸ್ಥರು ಆಗ್ರಹಿಸಿದ್ದಾರೆ.