Mysore
29
overcast clouds

Social Media

ಶನಿವಾರ, 13 ಜೂನ್ 2026
Light
Dark

ಚಾ.ನಗರ : ಖರ್ಗೆ ಆಯ್ಕೆಗೆ ಕಾಂಗ್ರೆಸ್ ವಿಜಯೋತ್ಸವ

ಚಾಮರಾಜನಗರ: ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ಆಯ್ಕೆಯಾಗುತ್ತಿದ್ದಂತೆ ನಗರದಲ್ಲಿ ಕಾಂಗ್ರೆಸ್ ಮುಖಂಡರು ,ಕಾರ್ಯ ಕರ್ತ ರು ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.
ಎಣಿಕೆ ಮುಗಿದು ಅಂತಿಮವಾಗಿ ಮಲ್ಲಿಕಾರ್ಜುನ ಖರ್ಗೆ ಅವರು ಅಭೂತ ಪೂರ್ವ ಗೆಲುವು ದಾಖಲಿಸುತ್ತಿದ್ದಂತೆ ಇಲ್ಲಿನ ಭುವನೇಶ್ವರಿ ವೃತ್ತದಲ್ಲಿ ಜಮಾಯಿಸಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಪಕ್ಷದ ಅಧಿನಾಯಕಿ ಸೋನಿಯಾಗಾಂಧಿ, ಯುವ ನಾಯಕ ರಾಹುಲ್‍ಗಾಂಧಿ ಪರ ಜೈಕಾರ ಹಾಕಿದರು.
ಯುವ ಮುಖಂಡ ಮಹೇಶ್ ಕುದರ್ ಈ ಸಂದರ್ಭದಲ್ಲಿ ಮಾತನಾಡಿ,ಖರ್ಗೆ ಅವರು ಅಧ್ಯಕ್ಷರಾಗಿಆಯ್ಕೆ
ಯಾಗಿರುವುದು ನಮ್ಮೆಲ್ಲರಿಗೂ ಸಂತಸ ತಂದಿದೆ. ನಿಷ್ಠಾವಂತ ನಾಯಕರಾದ ಅವರ ನೇತೃತ್ವದಲ್ಲಿ ರಾಷ್ಟ್ರದಲ್ಲಿ ಕಾಂಗ್ರೆಸ್ ಸದೃಢವಾಗಲಿದೆ ಎಂದು ವಿಶ್ವಾಸ ವ್ಯಕ್ತ ಪಡಿಸಿದರು.
ಅವರ ಆಯ್ಕೆಯು ರಾಜ್ಯ ಕಾಂಗ್ರೆಸ್‍ಗೆ ಹೊಸ ಹುರುಪು ತಂದಿದ್ದು ರಾಜ್ಯದಲ್ಲಿ ಅಧಿಕಾರ ಕಾಂಗ್ರೆಸ್ ಹಿಡಿಯಲಿದೆ. ಯುವಕರಿಗೆ ಖರ್ಗೆ ಸ್ಪೂರ್ತಿ ಯ ಚಿಲುಮೆಯಾಗಿದ್ದಾರೆ ಎಂದರು.
ಮುಖಂಡರಾದ ನಲ್ಲೂರು ಮಹದೇವಸ್ವಾಮಿ( ಮಾಲು), ಸಿ.ಕೆ. ರವಿಕುಮಾರ್, ಚನ್ನಪ್ಪ, ಸಿ.ಶ್ರೀನಿವಾಸ್, ಮಹದೇವಸ್ವಾಮಿ, ಶಿವಸ್ವಾಮಿ, ಮಲೆಯೂರು ಸೋಮಯ್ಯ ಮೊದಲಾದವರು ಇದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!