ಚಾಮರಾಜನಗರ: ಸಮಸ್ಯೆ ಹೇಳಿಕೊಳ್ಳಲು ಬಂದಿದ್ದ ಮಹಿಳೆಗೆ ಸಚಿವ ವಿ ಸೋಮಣ್ಣ ಕಪಾಳಮೋಕ್ಷ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೊಂದು ತಿರುವು ಪಡೆದುಕೊಂಡಿದೆ.
ಹೌದು, ಈ ಬಗ್ಗೆ ಮಾತನಾಡಿರುವ ಮಹಿಳೆ ಕೆಂಪಮ್ಮ ಅವರು ನನಗೆ ಸಚಿವರು ಹೊಡೆದಿಲ್ಲ, ಭಾವುಕಳಾದಾಗ ನನ್ನನ್ನು ಸಮಾಧಾನಪಡಿಸಿದರು ಎಂದು ಹೇಳಿದ್ದಾರೆ.
ನಾನು ಪದೇ ಪದೆ ಸಚಿವರ ಕಾಲಿಗೆ ನಮಸ್ಕರಿಸುತ್ತಿದ್ದಾಗ ಬೇಡ ಎಂದು ತಿಳಿಸಿದರು. ಆ ಸಂದರ್ಭದಲ್ಲಿ ಸ್ವಲ್ಪ ಹೊತ್ತು ಭಾವುಕಳಾದೆ. ತಕ್ಷಣ ಸಚಿವರು ನನ್ನನ್ನು ಸಮಾಧಾನಪಡಿಸಿ, ನಿನಗೆ ವಸತಿ ಕಲ್ಪಿಸಿ ಕೊಡುವುದಾಗಿ ಹೇಳಿದರು. ಅವರು ನನಗೆ ಒಳ್ಳೆಯದು ಮಾಡಿದ್ದಾರೆಯೇ ಹೊರತು ಕೆಟ್ಟದು ಮಾಡಿಲ್ಲ ಎಂದು ಹೇಳಿಕೆ ನೀಡಿದ್ದಾರೆ.