Mysore
21
overcast clouds

Social Media

ಶನಿವಾರ, 13 ಜೂನ್ 2026
Light
Dark

ಮೈಸೂರಿನತ್ತ ಪ್ರವಾಸಿಗರ ದಂಡು : ನಾಳೆ ಚಾಮುಂಡಿ ಬೆಟ್ಟಕ್ಕೆ ಪ್ರವಾಸಿಗರ ನಿರ್ಬಂಧ

ಮೈಸೂರು : ಮೈಸೂರಿನೆಲ್ಲೆಡೆ ಎಲ್ಲಾ ಹೋಟೆಲ್ ಗಳು ಭರ್ತಿ ಆಗಿದೆ. ಹೊರಗಿನಿಂದ ಬಂದಂತಹ ಪ್ರವಾಸಿಗರು ಉಳಿದುಕೊಳ್ಳಲು ಕಷ್ಟ ಪಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಈ ಬಾರಿ ನಡೆದ ಅದ್ದೂರಿ ದಸರಾ ನಂತರ ಮತ್ತೊಮ್ಮೆ ನಗರದ ಎಲ್ಲಾ ರಸ್ತೆಗಳು ಜನ ಜಂಗುಳಿಯಿಂದ  ಕೂಡಿದ್ದು ವ್ಯಾಪಾರಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.

 ನಾಳೆ ಸೂರ್ಯಗ್ರಹಣ ಹಿನ್ನೆಲೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ನಾಳೆ ಮಧ್ಯಾಹ್ನ 1 ಗಂಟೆ ಬಳಿಕ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ ಎಂದು ಚಾಮುಂಡೇಶ್ವರಿ ದೇವಸ್ಥಾನದ ಆಡಳಿತ ಮಂಡಳಿ ಪ್ರಕಟಣೆ ಹೊರಡಿಸಿದೆ. ವಿಶೇಷವಾಗಿ ನಾಳೆ ಸೂರ್ಯಗ್ರಹಣದ ಸಂದರ್ಭದಲ್ಲಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಲಿದೆ.

ಜಗತ್ತಿನೆಲ್ಲೆಡೆ ಮನೆ ಮನೆಯಲ್ಲಿ ದೀಪಾವಳಿ ಸಂಭ್ರಮ ರಂಗೇರಲಿದ್ದು ಎರಡು ವರ್ಷದ ಬಳಿಕ ಹಬ್ಬವನ್ನು  ಆಚರಿಸುತ್ತಿದ್ದಾರೆ. ದೀಪಾವಳಿ ಸಾಲಿನಲ್ಲಿ ಸಾಲು ಸಾಲು ಸರ್ಕಾರಿ ರಜೆ ಇದ್ದು,  ಸಾಂಸ್ಕೃತಿಕ ನಗರಿ ಮೈಸೂರಿನೆಡೆಗೆ ಪ್ರವಾಸಿಗರ ದಂಡೇ ಹರಿದುಬಂದಿದೆ.

 

 

ಮೈಸೂರಿನತ್ತ ಪ್ರವಾಸಿಗರು ದೌಡಾಯಿಸಿದ್ದು ,ಮೈಸೂರಿನ ಪ್ರಮುಖ ಪ್ರವಾಸಿ ತಾಣಗಳಗಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಜಮಾಯಿಸಿದ್ದಾರೆ. ಪ್ರವಾಸಿಗರಿಂದ ಮೈಸೂರಿನ ಪ್ರವಾಸಿ ತಾಣಗಳು ತುಂಬಿ ತುಳುಕಾಡುತ್ತಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!