Mysore
30
few clouds

Social Media

ಶನಿವಾರ, 28 ಫೆಬ್ರವರಿ 2026
Light
Dark

ಎಐಸಿಸಿ ಅಧ್ಯಕ್ಷರಾಗಿ ಖರ್ಗೆ ಸ್ವೀಕಾರ ; ಸಿದ್ದಯ್ಯನಪುರದಲ್ಲಿ ಸಂಭ್ರಮ

ಚಾಮರಾಜನಗರ : ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅವರು ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ತಾಲ್ಲೂಕಿನ ಸಿದ್ದಯ್ಯನಪುರದಲ್ಲಿ ಗ್ರಾಮಸ್ಥರು ಹಾಗೂ ಅಂಬೇಡ್ಕರ್ ಯುವಕರ ಸಂಘದ ಪದಾಧಿಕಾರಿಗಳು ಸಂಭ್ರಮ ಆಚರಿಸಿದರು.

ಗ್ರಾಮಸ್ಥರು ಗ್ರಾಮದ ಅಂಬೇಡ್ಕರ್ ಪ್ರತಿಮೆ ಬಳಿ ಜಮಾಯಿಸಿ ಪಟಾಕಿ ಸಿಡಿಸಿ, ಸಿಹಿ ಹಂಚಿಕೆ, ಅನ್ನ ಸಂತರ್ಪಣೆ ಮಾಡಲಾಯಿತು.

ಇದೇ ಸಂದರ್ಭದಲ್ಲಿ ಮುಖಂಡರಾದ ಚೆನ್ನಂಜಯ್ಯ ಅವರು ಮಾತನಾಡಿ, ಖರ್ಗೆ ಅವರು 1987 ರಲ್ಲಿ ಗ್ರಾಮಕ್ಕೆ ಆಗಮಿಸಿ 300 ಜನರಿಗೆ ಜಮೀನು ಸಾಗುವಳಿ ಪತ್ರ ವಿತರಿಸಿದ್ದರು. ಅಂದಿನ ಶಾಸಕ ಸಿದ್ದಯ್ಯ, ಎಂ.ಸಿ.ಬಸಪ್ಪ, ಬಿ.ರಾಚಯ್ಯ ಅವರು ಆಗಮಿಸಿದ್ದರು ಎಂದು ತಿಳಿಸಿದರು.

ಸತತವಾಗಿ ಶಾಸನ ಸಭೆ, ಸಂಸತ್ ಗೆ ಆಯ್ಕೆಯಾದರು. ಈಗ ಕಾಂಗ್ರೆಸ್ ನ ರಾಷ್ಟ್ರೀಯ ಅಧ್ಯಕ್ಷರಾಗಿದ್ದಾರೆ. ಮುಂದಿನ ದಿನಗಳಲ್ಲಿ ದೇಶದ ಪ್ರಧಾನಿಯಾಗಲಿ ಎಂದು ಆಶಯ ವ್ಯಕ್ತಪಡಿಸಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!