Mysore
28
overcast clouds

Social Media

ಬುಧವಾರ, 26 ಆಗಸ್ಟ್ 2026
Light
Dark

ಅದ್ದೂರಿಯಾಗಿ ನಡೆದ ಮಲೆಮಹದೇಶ್ವರ ಬೆಟ್ಟದ ಜಾತ್ರೆ

 ಚಾಮರಾಜನಗರ : ಪ್ರಸಿದ್ಧ ಕ್ಷೇತ್ರ ಮಲೆಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆಯ ರಥೋತ್ಸವ ಇಂದು ಲಕ್ಷಾಂತರ ಭಕ್ತರ ಸಮ್ಮುಖದಲ್ಲಿಅದ್ಧೂರಿಯಾಗಿ ನೆರವೇರಿತು.
ದೀಪಾವಳಿ ಹಬ್ಬದ ಬಲಿಪಾಡ್ಯಮಿ ಹಾಗೂ ಅಮಾವಾಸ್ಯೆ ಅಂಗವಾಗಿ ಸಾಲೂರು ಬೃಹನ್ಮಠದ ಪೀಠಾಧಿಪತಿ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಬೆಳಗ್ಗೆ 9.15ಕ್ಕೆ ರಥಕ್ಕೆ ಚಾಲನೆ ಕೊಟ್ಟರು.

ಉಘೇ ಮಾದಪ್ಪ, ಮಾಯಕಾರ ಮಾದಪ್ಪ ಎಂಬ ಲಕ್ಷಾಂತರ ಧ್ವನಿಗಳ ಮೂಲಕ ಎಲ್ಲರ ಮೈ ರೋಮಾಂಚನಗೊಳಿಸಿತು. ಅಧಿಕಾರಿಗಳು ಸೇರಿದಂತೆ ಭಕ್ತಾದಿಗಳು ಉತ್ಸಾಹದಿಂದ ರಥ ಎಳೆದು ಇಷ್ಟರ್ಥಕ್ಕಾಗಿ ಪ್ರಾರ್ಥಿಸಿದರು.

ರಾಜ್ಯದ ಮೂಲೆ – ಮೂಲೆಗಳಿಂದ ಲಕ್ಷಾಂತರ ಮಂದಿ ಭಕ್ತಾದಿಗಳು ಆಗಮಿಸಿದ್ದು, ಕಳೆದ 4 ದಿನಗಳಿಂದ ಲಕ್ಷ- ಲಕ್ಷ ಮಂದಿ ಭಕ್ತರು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ಸ್ವಾಮಿ ದರ್ಶನ ಪಡೆದಿದ್ದಾರೆ.
ಮಹದೇಶ್ವರನ ಪ್ರಸಾದವಾದ ಲಾಡು ಕಳೆದ 2 ದಿನದಿಂದ ಎರಡೂವರೆ ಲಕ್ಷಕ್ಕೂ ಹೆಚ್ಚು ಲಾಡು ಮಾರಾಟವಾಗಿದೆ.

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!