Mysore
27
overcast clouds

Social Media

ಶನಿವಾರ, 13 ಜೂನ್ 2026
Light
Dark

ಭಿಕ್ಷುಕರ & ಸಾಲಗಾರರ ರಾಷ್ಟ್ರವನ್ನಾಗಿ ಮಾಡಿದ್ದೇ ಕಾಂಗ್ರೆಸ್ ಆಡಳಿತದ ಸಾಧನೆ : ನಳಿನ್ ಕುಮಾರ್ ಕಟೀಲ್

ಹನೂರು: ಕಾಂಗ್ರೆಸ್ ಸರ್ಕಾರದ ಆಡಳಿತಾವಧಿಯಲ್ಲಿ ದೇಶವನ್ನು ಭಿಕ್ಷುಕರ, ಸಾಲಗಾರರ ರಾಷ್ಟ್ರವನ್ನಾಗಿ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದರು.

ಬಿಜೆಪಿ ಜನಸಂಕಲ್ಪ ಯಾತ್ರೆ ಅಂಗವಾಗಿ ಹನೂರು ಪಟ್ಟಣದ ಬೆಟ್ಟಳ್ಳಿ ಮಾರಮ್ಮ ದೇವಾಲಯಕ್ಕೆ ಆಗಮಿಸಿದ ವೇಳೆ ಸುದ್ದಿಗಾರರೋಡನೆ ಮಾತನಾಡಿದ ಅವರು ದೇಶದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಜಗತ್ತಿನಲ್ಲಿ ಐದನೇ ರಾಷ್ಟ್ರವಾಗಿ ಹೊರಹೊಮ್ಮಿದೆ. ಬಂಡವಾಳ ಹೂಡಿಕೆಯಲ್ಲಿ ರಾಜ್ಯ ಒಂದನೇ ಸ್ಥಾನ ಅಲಂಕರಿಸಿದೆ. ಸಿದ್ದರಾಮಯ್ಯ ಅವರ ಅವಧಿಯಲ್ಲಿ ರಾಜ್ಯವನ್ನು ಸಾಲಗಾರರ ರಾಜ್ಯವನ್ನಾಗಿ ಮಾಡಿದ್ದಾರೆ ಎಂದು ಟೀಕಿಸಿದ ಅವರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಅನಾರೋಗ್ಯದ ನಿಮಿತ್ತ ನನ್ನ ಅನುಮತಿಯನ್ನು ಪಡೆದು ಆಗಮಿಸಿಲ್ಲ ಎಂದು ಸ್ಪಷ್ಟಪಡಿಸಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!