Mysore
32
few clouds

Social Media

ಶನಿವಾರ, 21 ಫೆಬ್ರವರಿ 2026
Light
Dark

ಸಾವಿನಲ್ಲೂ ಸಾರ್ಥಕತೆ; ತಂದೆಯ ಅಂಗಾಂಗ ದಾನ

ಕೆ.ಆರ್.ಪೇಟೆ :  ತಂದೆಯ  ಸಾವಿನ ಆಘಾತದಲ್ಲಿಯೂ  ಕುಟುಂಬದವರು ದಿಟ್ಟ ನಿರ್ಧಾರ ಕೈಗೊಂಡು ಅಂಗಾಂಗ ದಾನ ಮಾಡಲು ಒಪ್ಪಿಗೆ ನೀಡುವ ಮೂಲಕ ಮಾದರಿಯಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ.

ಬೂಕನಕರೆ ಹೋಬಳಿಯ  ಗಂಜಿಗೆರೆ ಕೊಪ್ಪಲು ಗ್ರಾಮದ ಮೊಗಣ್ಣೇಗೌಡ (65) ಬ್ರೈನ್ ಸ್ಟ್ರೋಕ್‌ಗೆ ಒಳಗಾಗಿದ್ದರು. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮೆದುಳು ನಿಷ್ಕ್ರೀಯಗೊಂಡಿದ್ದನ್ನು ವೈದ್ಯರು ದೃಢಪಡಿಸಿದ್ದರು.  ಇನ್ನು ತಂದೆ ಜೀವಂತವಾಗಿ ಉಳಿಯುವುದಿಲ್ಲ ಎಂಬುದನ್ನು ಮನಗಂಡ ಪುತ್ರರು ಡಾ.ವಾಸನ್ ಅವರ ಸಲಹೆ ಮೇರೆಗೆ ತಮ್ಮ ತಂದೆಯ ಅಂಗಾಂಗ ದಾನಕ್ಕೆ ಒಪ್ಪಿಗೆ ಸೂಚಿಸಿದ್ದಾರೆ.

ಕುಟುಂಬಸ್ಥರು ಅಂಗಾಂಗ ದಾನಕ್ಕೆ ಒಪ್ಪಿಗೆ ನೀಡುತ್ತಿದ್ದಂತೆೆ ಮೈಸೂರು ಜೆಎಸ್‌ಎಸ್ ಆಸ್ಪತ್ರೆಯ ವೈದ್ಯರಾದ ಡಾ.ವಾಸನ್ ಅವರು ಪರಿಶೀಲಿಸಿ ಮೊಗಣ್ಣೆಗೌಡ ದೇಹದಿಂದ ಲಿವರ್, ಎರಡು ಕಿಡ್ನಿ, ಹೃದುಂ, ಚರ್ಮ, ಕಣ್ಣುಗಳನ್ನು ತೆಗೆದು ಬೇರೆಯವರಿಗೆ ಹಾಕಬಹುದು ಎಂದು ತಿಳಿಸಿದ್ದಾರೆ.

ಮೃತ ಮೊಗಣ್ಣೇಗೌಡರ ಅಂತ್ಯಸಂಸ್ಕಾರವು ಸ್ವಗ್ರಾಮದಲ್ಲಿ ಅ.28 (ಇಂದು) ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!