Mysore
21
overcast clouds

Social Media

ಶುಕ್ರವಾರ, 14 ಆಗಸ್ಟ್ 2026
Light
Dark

ಹನೂರು: ಮೀನು ಹಿಡಿಯಲು ಹೋಗಿ ಮೃತಪಟ್ಟ ಯುವಕ

ಹನೂರು: ಮೀನು ಹಿಡಿಯಲು ತೆರಳಿದ್ದ ವ್ಯಕ್ತಿಯೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ವಡ್ಡರದೊಡ್ಡಿ ಗ್ರಾಮದಲ್ಲಿ ಜರುಗಿದೆ. ತಾಲ್ಲೂಕಿನ ವಡ್ಡರದೊಡ್ಡಿ ಗ್ರಾಮದ ನಿವಾಸಿ ಮದಲೈಮುತ್ತು(35) ಮೃತಪಟ್ಟ ದುರ್ದೈವಿಯಾಗಿದ್ದಾನೆ.

ಘಟನೆ ವಿವರ : ನಾಲ್ ರೋಡ್ ಗ್ರಾಮದಿಂದ ಮಾಟಳ್ಳಿ ಗ್ರಾಮಕ್ಕೆ ತೆರಳುವ ಮಾರ್ಗ ಮಧ್ಯದಲ್ಲಿ ಸಿಗುವ ಚೆಕ್ ಡ್ಯಾಮ್ ನಲ್ಲಿ ಮೃತ ಮದಲೈ ಮುತ್ತು ಪ್ರತಿದಿನ ಮೀನು ಹಿಡಿಯಲು ತೆರಳುತ್ತಿದ್ದರು ಎನ್ನಲಾಗಿದೆ. ಇಂದು ಸಹ ಮೀನು ಹಿಡಿಯಲು ಬಲೆ ಹಾಕುವ ವೇಳೆ ಮೂರ್ಚೆ ತಪ್ಪಿ ನೀರಿನಲ್ಲಿ ಮುಳುಗಿದ್ದಾರೆ. ತಕ್ಷಣ ಗ್ರಾಮಸ್ಥರು ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಹೊರತೆಗೆದು ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ. ಈ ಸಂಬಂಧ ರಾಮಾಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!