Mysore
25
overcast clouds

Social Media

ಗುರುವಾರ, 18 ಜೂನ್ 2026
Light
Dark

ವಿದ್ಯುತ್ ತಂತಿ ಮೇಲಿನ ಬಟ್ಟೆ ತೆಗೆಯಲು ಹೋದಾಗ ಶಾಕ್ ಹೊಡೆದು ವ್ಯಕ್ತಿ ಸಾವು

ಹಾಸನ ; ವಿದ್ಯುತ್ ತಂತಿ ಮೇಲಿದ್ದ ಬಟ್ಟೆ ತೆಗೆಯಲು ಮುಂದಾದಾಗ ಶಾಕ್ ಹೊಡೆದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ.


ಹಾಸನದ ಉದಯಗಿರಿ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು ಮಲ್ಲಪ್ಪ ಎಂಬ ವ್ಯಕ್ತಿ ಮನೆ ಮುಂದೆ ಹಾದುಹೋಗಿದ್ದ ವಿದ್ಯುತ್ ತಂತಿ ಮೇಲೆ ಬಿದ್ದಿರುವ ಬಟ್ಟೆಯನ್ನು ತೆಗೆಯಲು ನೆಲ ಒರೆಸುವ ಮಾಪ್ ಬಳಸಿ ತಂತಿ ಮೇಲಿದ್ದ ವಸ್ತು ತೆಗೆಯಲು ಮುಂದಾಗಿದ್ದು,  ಈ ವೇಳೆ ವಿದ್ಯುತ್ ಶಾಕ್ ಹೊಡೆದು ಮಲ್ಲಪ್ಪ ಸಾವನ್ನಪ್ಪಿದ್ದಾರೆ.

ಈ ದೃಶ್ಯ ಸಿಸಿ ಟಿವಿಯಲ್ಲಿ ರೆಕಾರ್ಡ್ ಆಗಿದ್ದು, ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!