ಮದ್ದೂರು: ತಾಲೂಕಿನ ಕುಂದನ ಕುಪ್ಪೆಯಲ್ಲಿ ಕುರಿ ಕೊಟ್ಟಿಗೆಗೆ ನುಗ್ಗಿದ ಚಿರತೆಯನ್ನು ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಪ್ರಯತ್ನ ನಡೆಸಿದ್ದಾರೆ.
ಸುಮಾರು ಐದಾರು ಗಂಟೆಯಿಂದ
ಕೊಟ್ಟಿಗೆಯಲ್ಲಿ ಅವಿತು ಕುಳಿತಿರುವ ಚಿರತೆಯನ್ನು ಹಿಡಿಯಲು ಹೊರಗಡೆ ಬೋನು ಇಟ್ಟು ಅರಣ್ಯ ಇಲಾಖೆ ಸಿಬ್ಬಂದಿ ಕಾಯುತ್ತಿದ್ದಾರೆ. ಈ ಭಾಗದಲ್ಲಿ ಚಿರತೆ ಹಾವಳಿ ವಿಪರೀತವಾಗಿದ್ದು ಐದಾರು ತಿಂಗಳ ಹಿಂದೆ ನಾಲ್ಕು ಚಿರತೆಗಳನ್ನು ಸೆರೆ ಹಿಡಿಯಲಾಗಿತ್ತು.
ಆದರೆ ಚಿರತೆ ಮತ್ತೆ ಕಾಣಿಸಿಕೊಂಡಿರುವುದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ರೈತರು ತಮ್ಮ ಹೊಲಗದ್ದೆಗಳಿಗೆ ಹಗಲು ವೇಳೆ ಒಬ್ಬೊಬ್ಬರೇ ಹೋಗಲು ಸಹ ಭಯಭೀತರಾಗಿದ್ದಾರೆ.
ಶಾಲಾ ಮಕ್ಕಳು, ವೃದ್ಧರು ಮಹಿಳೆಯರು ಗ್ರಾಮದ ಹೊರಕ್ಕೆ ಹೋಗಲೂ ಭಯಪಡುವಂತಾಗಿದೆ
ಅರಣ್ಯ ಇಲಾಖೆಯವರು ಗ್ರಾಮಸ್ಥರ ನೆರವಿನೊಂದಿಗೆ ಬೋನುಗಳನ್ನು ಇಟ್ಟು ಚಿರತೆ ಹಿಡಿದು ಈ ಭಾಗದ ರೈತರ ಜೀವ ಉಳಿಸಲು ಮುಂದಾಗ ಬೇಕೆಂದು ಗ್ರಾಮದ ಮುಖಂಡ ಕುಂದನ್ ಕುಪ್ಪೆ ಕುಮಾರ್ ಅವರು ಒತ್ತಾಯಿಸಿದ್ದಾರೆ.





