Mysore
21
overcast clouds

Social Media

ಭಾನುವಾರ, 14 ಜೂನ್ 2026
Light
Dark

ಮೈಸೂರಿಗೆ ಇಂದು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಆಗಮನ

ಚೆನ್ನೈ: ಮೈಸೂರು ಚೆನ್ನೈ ಮಧ್ಯೆ ದಕ್ಷಿಣ ಭಾರತದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಇಂದಿನಿಂದ ಟ್ರಯಲ್ ರನ್ ಆರಂಭಿಸಿದೆ. ಚೆನ್ನೈನ ಎಂಜಿ ರಾಮಚಂದ್ರನ್ ಕೇಂದ್ರ ರೈಲ್ವೆ ನಿಲ್ದಾಣದಿಂದ ಬೆಳಿಗ್ಗೆ 6 ಗಂಟೆಗೆ ರೈಲು ನಿರ್ಗಮಿಸಿದ್ದು, ಮಧ್ಯಾಹ್ನ 12.30ರ ಸುಮಾರಿಗೆ ಮೈಸೂರು ತಲುಪಲಿದೆ.

ಹೈಸ್ಪೀಡ್ ರೈಲು ಚೆನ್ನೈ ಮೈಸೂರು ಮಧ್ಯೆ 6 ಗಂಟೆ 30 ನಿಮಿಷದಲ್ಲಿ 504 ಕಿಮೀ ಸಂಚರಿಸಲಿದೆ. ಮಧ್ಯದಲ್ಲಿ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಮಾತ್ರ ಒಂದು ಸ್ಟಾಪ್ ಇರಲಿದೆ.

ಟ್ರಯಲ್​ಗಾಗಿ ವಂದೇ ಭಾರತ್ ಎಕ್ಸಪ್ರೆಸ್ ರೈಲು ಭಾನುವಾರ ಚೆನ್ನೈ ತಲುಪಿದ ಬಳಿಕ ವಿಭಾಗೀಯ ಹೆಚ್ಚುವರಿ ರೈಲ್ವೆ ಮ್ಯಾನೇಜರ್ ಭಾನುವಾರ ವಿಡಿಯೋ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. “ಕೊನೆಗೂ ಒಳ್ಳೆಯ ಸುದ್ದಿ ಬಂತು. ಟ್ರಯಲ್ ರನ್​ಗಾಗಿ ವಂದೇ ಭಾರತ್ ಚೆನ್ನೈಗೆ ಬಂದಿದೆ” ಎಂದು ಬರೆದುಕೊಂಡಿದ್ದರು.

ಈ ರೈಲು ಬುಧವಾರ ಹೊರತುಪಡಿಸಿ ವಾರದ ಆರು ದಿನಗಳಲ್ಲಿ ಲಭ್ಯ ಇರಲಿದೆ. ಸ್ವಯಂಚಾಲಿತ ಡೋರ್, ವೈಫೈ ಇಂಟರ್​ನೆಟ್ ಜೊತೆ ಸುಸಜ್ಜಿತ ತಂತ್ರಜ್ಞಾನದ 16 ಕೋಚ್​ಗಳನ್ನು ಇದು ಹೊಂದಿರಲಿದೆ. ನ.11 ರಂದು ಬೆಂಗಳೂರಲ್ಲಿ ಈ ರೈಲಿಗೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!