Mysore
30
few clouds

Social Media

ಮಂಗಳವಾರ, 03 ಮಾರ್ಚ್ 2026
Light
Dark

ಸತೀಶ್ ಜಾರಕಿಹೊಳಿ ದೇಶದ ಜನರ ಕ್ಷಮೆಯಾಚಿಸಲಿ: ಟಿ.ಎಸ್.ಶ್ರೀವತ್ಸ

ಮೈಸೂರು: ಹಿಂದೂ ಪದದ ವಿಚಾರದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನೀಡಿರುವ ಹೇಳಿಕೆಯು ಅತ್ಯಂತ ಖಂಡನೀಯವಾಗಿದ್ದು, ದೇಶದ ಜನರ ಕ್ಷಮೆಯಾಚಿಸಬೇಕು ಎಂದು ಮೈಸೂರು ನಗರ ಬಿಜೆಪಿ ಅಧ್ಯಕ್ಷ ಟಿ.ಎಸ್.ಶ್ರೀವತ್ಸ ಆಗ್ರಹಿಸಿದ್ದಾರೆ.

ಹಿಂದೂ ಧರ್ಮಕ್ಕೆ ಭಾರತದಲ್ಲಿ ತನ್ನದೇ ಆದ ಪರಂಪರೆ,ಇತಿಹಾಸವಿದೆ. ನಾನೊಬ್ಬ ಹಿಂದೂ ಎಂದು ಹೇಳಿಕೊಳ್ಳಲು ಹೆಮ್ಮೆಯಿದೆ. ಸುಪ್ರೀಂಕೋರ್ಟ್ ಹಿಂದೂ ಪದದ ವಿಚಾರದಲ್ಲಿ ತನ್ನದೇ ಆದ ಗೌರವವನ್ನು ಹೊಂದಿರುವುದನ್ನು ಉಲ್ಲೇಖಿಸಿದೆ. ಹೀಗಿದ್ದರೂ ಸತೀಶ್ ಜಾರಕಿಹೊಳಿ ಈ ರೀತಿ ಮಾತನ್ನಾಡಿರುವುದು ಸಹಿಸಲಾಗದು ಎಂದು ಹೇಳಿದ್ದಾರೆ.

ಸತೀಶ್ ಜಾರಕಿಹೊಳಿ ಅವರ ಹೇಳಿಕೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಖಂಡಿಸುವುದಕ್ಕೆ ಸೀಮಿತವಾಗದೆ ಅವರನ್ನು ಪಕ್ಷದ ಹುದ್ದೆಯಿಂದ ತೆಗೆದುಹಾಕಿ, ಪಕ್ಷದಿಂದ ಅಮಾನತುಪಡಿಸಬೇಕು ಎಂದು ಒತ್ತಾಯಿಸಿದರು. ಮಾನವ ಬಂಧುತ್ವ ವೇದಿಕೆ ಮೂಲಕ ಸಮಾಜವನ್ನು ಸರಿಪಡಿಸುವ ದಾರಿಗೆ ಮುಂದಾಗುವ ಬದಲಿಗೆ ಜಾತ್ಯತೀತತೆ ಹೆಸರಿನಲ್ಲಿ ಹಿಂದೂತ್ವದ ವಿರುದ್ಧ,ಹಿಂದೂ ಪದದ ಬಗ್ಗೆ ಅಗೌರವ ತೋರಿರುವುದು ಸರಿಯಲ್ಲ. ಒಬ್ಬ ಜವಾವ್ದಾರಿಯುತ ನಾಯಕನಾಗಿ ನೀಡಿರುವ ಹೇಳಿಕೆ ನೋಡಿದರೆ ಅವರಲ್ಲಿ ಪ್ರಬುದ್ಧತೆಯ ಕೊರತೆ ಕಾಡುತ್ತಿದೆ ಎಂದು ಟೀಕಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!