Mysore
23
overcast clouds

Social Media

ಶುಕ್ರವಾರ, 03 ಜುಲೈ 2026
Light
Dark

ಮುಂದುವರಿದ ವ್ಯಾಘ್ರ ದಾಳಿ: ಆತಂಕದಲ್ಲಿ ಜನತೆ.

ಹನಗೋಡು ; ಹಸುವೊಂದು ಮೇವು ಮೇಯ್ಯುವಾಗ ಇಂದು ಮಧ್ಯಾಹ್ನ  ದಾಳಿ ಮಾಡಿ ಬಲಿ ತೆಗೆದುಕೊಂಡಿರುವ ಘಟನೆ  ಹನಗೋಡು ಸಮೀಪದ ಬಿ ಆರ್ ಕಾವಲು ಅರಣ್ಯದಲ್ಲಿ ನಡೆದಿದೆ.

ಗೌಡಿಕೆರೆ ಗ್ರಾಮದ ಶೇಖರ್ ಎಂಬುವವರಿಗೆ ಸೇರಿದ ಹಸುವನ್ನು ಕೊಂದಿರುವ ಹುಲಿ ಸುಮಾರು ಅಂದಾಜು 200 ಮೀ. ನಷ್ಟು ಎಳೆದೊಯ್ದು ಬಿಟ್ಟು ಹೋಗಿದೆ. ಹಸುವಿನ ಮಾಲೀಕ ಶೇಖರ್ ಮೇವು ಮೇಯ್ಯುವ ಜಾಗಕ್ಕೆ ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ಎರಡು ತಿಂಗಳ ಹಿಂದೆ ಹಸುವೊಂದನ್ನು ಹುಲಿ ಗಾಯಗೊಳಿಸಿ ಬಿಟ್ಟು ಹೋಗಿತ್ತು. ಈ ಹಸು ಈಗ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದೆ. ಸತತ ಎರಡು ದಿನ ಹುಲಿ ದಾಳಿ ನಡೆಸಿರುವ ಹಿನ್ನೆಲೆಯಲ್ಲಿ ಜನತೆ ಆತಂಕಗೊಂಡಿದ್ದು, ಶಾಲಾ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ಹಾಗೂ ತೋಟಗಳಿಗೆ ಕೆಲಸಕ್ಕೆ ತೆರಳುವ ಕಾರ್ಮಿಕರು ಭಯಭೀತರಾಗಿದ್ದಾರೆ.

ಅರಣ್ಯ ಇಲಾಖೆಯ ಅಧಿಕಾರಿ ಸಿದ್ಧರಾಜು ಸ್ಥಳಕ್ಕೆ ಭೇಟಿ ನೀಡಿ ಇಲಾಖೆಯಿಂದ ಬರುವ ಪರಿಹಾರ ಧನವನ್ನು ಕೂಡಲೇ ನೀಡಲಾಗುವುದು ಎಂದು ತಿಳಿಸಿದರು.

ಈ ವ್ಯಾಪ್ತಿಯಲ್ಲಿ ನಿಲ್ಲದ ಹುಲಿ ಅಟ್ಟಹಾಸ ; ನಾಲ್ಕು ಹಸುಗಳು ಬಲಿ
ಭಯ ಹುಟ್ಟಿಸಿದ ಹುಲಿ ಹೆಜ್ಜೆ: ಬಿಲ್ಲೆನಹೊಸಹಳ್ಳಿ ಕೊಳವಿಗೆ ನೇಗತ್ತೂರು ಹೀಗೆ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಆತಂಕ ಮನೆ ಮಾಡಿದ್ದು.ತಕ್ಷಣ ಹುಲಿ ಹಿಡಿಯಲು ಕ್ರಮ ವಹಿಸಬೇಕು ಎಂದು ಗ್ರಾಂ ಪಂ ಸದಸ್ಯ ಎಚ್‌ ಪಿ ಶಿವಣ್ಣ ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!