Mysore
26
overcast clouds

Social Media

ಶನಿವಾರ, 22 ಆಗಸ್ಟ್ 2026
Light
Dark

ಗಿರಿಜನ ಕರಿಯಪ್ಪ ಹತ್ಯೆ : ಜಾಮೀನು ಅರ್ಜಿ ವಜಾ

ಮೈಸೂರು: ಎಚ್.ಡಿ.ಕೋಟೆ ತಾಲ್ಲೂಕಿನ ಹೊಸಹಳ್ಳಿ ಹಾಡಿಯ ಗಿರಿಜನ ವ್ಯಕ್ತಿ ಕರಿಯಪ್ಪ ಹತ್ಯೆ ಆರೋಪಿಗಳ ಜಾಮೀನು ಅರ್ಜಿಯನ್ನು ೬ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಿರಸ್ಕರಿಸಿದೆ.

ಅ.೧೨ರಂದು ಗಿರಿಜನ ವ್ಯಕ್ತಿ ಅರಣ್ಯ ಇಲಾಖೆ ಕಸ್ಟಡಿಯಲ್ಲಿ ಮೃತಪಟ್ಟ ಪ್ರಕರಣದಲ್ಲಿ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಎನ್.ಬೇಗೂರು ವಲಯ ಅರಣ್ಯಾಧಿಕಾರಿ ಸೇರಿ ೧೭ ಮಂದಿ ಆರೋಪಿಗಳು ಜಾಮೀನು ನೀಡುವಂತೆ ಎರಡು ಅರ್ಜಿಗಳನ್ನು ಸಲ್ಲಿಸಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ ನ್ಯಾಯಾಧೀಶರು ವಾದ-ಪ್ರತಿವಾದಗಳನ್ನು ಆಲಿಸಿ ಬುಧವಾರ ೧೭ ಆರೋಪಿಗಳ ಜಾಮೀನು ಅರ್ಜಿಯನ್ನು ವಜಾಗೊಳಿಸಿದರು.ಪ್ರಕರಣವನ್ನು ಈಗಾಗಲೇ ಸಿಐಡಿಗೆ ವಹಿಸಲಾಗಿದ್ದು, ಸಿಐಡಿ ಡಿವೈಎಸ್ಪಿ ಗೋಪಾಲಕೃಷ್ಣ ನೇತೃತ್ವದ ತಂಡ ತನಿಖೆ ಆರಂಭಿಸಿ ಸುಮಾರು ೧೯ ದಿನಗಳಾಗಿವೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!