Mysore
29
clear sky

Social Media

ಬುಧವಾರ, 04 ಫೆಬ್ರವರಿ 2026
Light
Dark

ರಸ್ತೆಯಲ್ಲಿ ನಿಂತು ಕುರಿ ದನಗಳ ಮಾರಾಟ : ವಾಹನ ಸಂಚಾರ ಅಸ್ತವ್ಯಸ್ಥ

ನಂಜನಗೂಡು : ಮೈಸೂರು ಚಾಮರಾಜನಗರ ಬೈಪಾಸ್ ರಸ್ತೆಯ ಮಧ್ಯದಲ್ಲಿ ಕುರಿ ಮತ್ತು ದನಗಳ ವ್ಯಾಪಾರ ಮಾಡುವುದು ನಡೆಯುತ್ತವೆ.

ಪ್ರತಿ ಶುಕ್ರವಾರ ನಡೆಯುವ ದನದ ವ್ಯಾಪಾರ ಮತ್ತು ಕುರಿ ವ್ಯಾಪಾರ ಸಂತೆ ರದ್ದಾಗಿದೆ ಕಾರಣ ಹಸುಗಳಿಗೆ ಗಂಟು ರೋಗ ಬರುತ್ತಿರುವ ಹಿನ್ನೆಲೆಯಲ್ಲಿ ಸಂತೆ ರದ್ದು ಮಾಡಲಾಗಿದೆ.
ಆದರೆ ನಿಗದಿತ ಸ್ಥಳದಲ್ಲಿ ವ್ಯಾಪಾರ ಇಲ್ಲದ ಕಾರಣ ಗ್ರಾಮಾಂತರಗಳಿಂದ ಬರುವ ಹಸುಗಳ ಮತ್ತು ಕುರಿಗಳ ವ್ಯಾಪಾರಸ್ಥರು ಸರ್ಕಾರಿ ಆಸ್ಪತ್ರೆಯ ಪಕ್ಕದಲ್ಲಿ ಖಾಲಿ ಇರುವ ಜಾಗದ ಜೊತೆಗೆ ರಸ್ತೆಯ ಅರ್ಧಭಾಗವನ್ನು ಅಕ್ರಮಿಸಿಕೊಂಡು ರಸ್ತೆಯಲ್ಲಿ ನಿಂತು ಕುರಿಗಳ ವ್ಯಾಪಾರ ದನಗಳ ವ್ಯಾಪಾರ ಮಾಡುತ್ತಿದ್ದಾರೆ.

ಆದರೆ ಮೈಸೂರಿನಿಂದ ಚಾಮರಾಜನಗರ, ನರಸೀಪುರ , ಕೊಳ್ಳೇಗಾಲ, ಹನೂರು, ಕೊಯಮತ್ತೂರು, ಈ ಮಾರ್ಗವಾಗಿ ಹೋಗುವ ಬಸ್ಸುಗಳು,  ಲಾರಿಗಳು, ಪ್ರತಿನಿತ್ಯ ಸಾವಿರಾರು ವಾಹನಗಳು ಬೆಳಗಿನ ಜಾವದಿಂದಲೇ ಓಡಾಡುತ್ತಿರುತ್ತವೆ, ಆದರೆ ದನ  ಮತ್ತು ಕುರಿ ವ್ಯಾಪಾರಸ್ಥರು ಯಾವುದೇ ಭಯಭೀತಿಲ್ಲದೆ ರಸ್ತೆಯ ಮಧ್ಯದಲ್ಲಿ ನಿಂತು ಪರಿಜ್ಞಾನವಿಲ್ಲದೇ ವ್ಯಾಪಾರ ಮಾಡುತ್ತಿರುತ್ತಾರೆ. ಏನಾದರೂ ಆಯ ತಪ್ಪಿ ಅನಾಹುತ ಉಂಟಾದರೆ ನೂರಾರು ರೈತರು ತಮ್ಮ  ದನ ಕರುಗಳು ಕುರಿಗಳ ಜೊತೆ ಪ್ರಾಣ ಕಳೆದುಕೊಳ್ಳುವ ಸಂಭವ ನಿರ್ಮಾಣ ಆಗುತ್ತದೆ.

ದ್ವಿಚಕ್ರ ವಾಹನಗಳು ಲಾರಿಗಳು ಬಸ್ಸುಗಳು ಎಷ್ಟೇ ಶಬ್ಧ  ಮಾಡಿದರು ಕೂಡ ರಸ್ತೆಯನ್ನು ಬಿಟ್ಟು ಜಗ್ಗುವುದಿಲ್ಲ, ವಾಹನ ಚಾಲಕರೇ ಆದಷ್ಟು ನಿಧಾನಗತಿಯಲ್ಲಿ ರಸ್ತೆದಾಟು ಪರಿಸ್ಥಿತಿ ಉಂಟಾಗಿದೆ. ಹೆಚ್ಚಿನ ಅನಾಹುತ ಉಂಟಾಗುವ ಮೊದಲು ಸಂಬಂಧಪಟ್ಟವರು ರಸ್ತೆಯಲ್ಲಿ ವ್ಯಾಪಾರ ಮಾಡುವ ಕುರಿ ಮತ್ತು ದನದ ಸಂತೆಗಳನ್ನು ರದ್ದುಪಡಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!