Mysore
22
overcast clouds

Social Media

ಭಾನುವಾರ, 14 ಜೂನ್ 2026
Light
Dark

ಮಲೆ ಮಹದೇಶ್ವರ ಬೆಟ್ಟಕ್ಕೆ : ತಮಿಳುನಾಡು ಎಡಿಜಿಪಿ ಜಯರಾಮ್ ರವರು ಭೇಟಿ

ಹನೂರು : ತಮಿಳುನಾಡು ಎಡಿಜಿಪಿ ಜಯರಾಮ್ ರವರು ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕನಕಪುರ ತಾಲೂಕಿನವರಾದ ಇವರು ಕಳೆದ ಒಂದು ವರ್ಷಗಳಿಂದ ಎಡಿಜಿಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸಾಮಾನ್ಯರಂತೆ ಎಡಿಜಿಪಿ ರವರು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ಮಲೆ ಮಾದೇಶ್ವರ ದರ್ಶನ ಪಡೆದು, ದೇವಸ್ಥಾನದ ಆವರಣದಲ್ಲಿ ಸ್ವಚ್ಛತಾ ಸೇವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು.
ನಂತರ ಸಾಲೂರು ಬೃಹನ್ ಮಠಕ್ಕೆ ಭೇಟಿ ನೀಡಿ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿರವರ ಆಶೀರ್ವಾದ ಪಡೆದು ಶ್ರೀಮಠದಲ್ಲಿ ವಾಸ್ತವ್ಯವಿದ್ದು ಮರುದಿನ ಕರ್ತವ್ಯಕ್ಕೆ ತೆರಳಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!