Mysore
23
overcast clouds

Social Media

ಭಾನುವಾರ, 23 ಆಗಸ್ಟ್ 2026
Light
Dark

ಬ್ಯಾಂಕಿನಲ್ಲಿ ಬೆಳೆ ಸಾಲ ಕೊಡಲು ನಿರಾಕರಿಸಿದ್ದಕ್ಕೆ ಕೀಟನಾಶಕ ಸೇವಿಸಿ ಅಸ್ವಸ್ಥನಾದ ರೈತ

ಎಚ್ ಡಿ ಕೋಟೆ: ತಾಲೂಕಿನ ಅಂತರ ಸಂತೆ ಹೋಬಳಿಯ ಹೊಸಹೂಳಲು ಗ್ರಾಮದ ನಿಂಗೇಗೌಡ ಸುಮಾರು 70 ವರ್ಷದ ರೈತ ನಾಲ್ಕು ಎಕರೆ ಜಮೀನು ಹೊಂದಿದ್ದು ಕಬ್ಬಿನ ಬೆಳೆಗೆ ಬೆಳೆ ಸಾಲಕ್ಕೆ ಅಂತ ರ ಸಂತೆಯ ಕರ್ನಾಟಕ ಗ್ರಾಮೀಣ ಬ್ಯಾಂಕ್ಗೆ ಅರ್ಜಿ ಹಾಕಿದ್ದು ನಿಮಗೆ ಸಾಲ ಕೊಡಲು ಬರುವುದಿಲ್ಲ ಎಂದು ತಿಳಿಸಿ ನೋಟಿಸ್ ಕೊಟ್ಟ ಕಾರಣ ಬೇಸರ ಗೊಂಡು ರೈತ ನಿಂಗೇಗೌಡ ಇಂದು ಮಧ್ಯಾಹ್ನ ಬ್ಯಾಂಕ್ ಗೆ ಬಂದು ವಿಷ ಸೇವಿಸಿ ಅಸ್ವಸ್ಥರಾಗಿ ವಾಂತಿ ಮಾಡಿಕೊಂಡು ಒದ್ದಾಡುತ್ತಿದ್ದಾಗ ಬ್ಯಾಂಕಿನ ಸಿಬ್ಬಂದಿ ಅವರ ಮಗನಿಗೆ ಕರೆ ಮಾಡಿ ತಿಳಿಸಿದರು ,ಬ್ಯಾಂಕಿಗೆ ಬಂದ ಅವರ ಮಗ ತಂದೆಯನ್ನು ಎಚ್ ಡಿ ಕೋಟೆ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಪ್ರಾಥಮಿಕ ಹಂತದ ಚಿಕಿತ್ಸೆ ಮಾಡಿಸಿಕೊಂಡು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ ಆರ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

 

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!