Mysore
21
broken clouds

Social Media

ಭಾನುವಾರ, 14 ಜೂನ್ 2026
Light
Dark

ಚಾ.ನಗರ : ಡಿ. 7ರಂದು ಯುವಜನೋತ್ಸವ

ಚಾಮರಾಜನಗರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಯುವಜನೋತ್ಸವವನ್ನು ಡಿ. ೭ರಂದು ನಗರದ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾಗಿದ್ದು, ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಸ್ಪರ್ಧಿಗಳನ್ನು ಮಾತ್ರ ರಾಜ್ಯ ಮಟ್ಟದ ಯುವಜನೋತ್ಸವ ಸ್ಪರ್ಧೆಯ ಕಾರ್ಯಕ್ರಮಕ್ಕೆ  ಕಳುಹಿಸಲಾಗುತ್ತದೆ. ಸ್ಪರ್ಧಿಗಳು ಡಿಸೆಂಬರ್ ೫ ರಂದು ಬೆಳಿಗ್ಗೆ ೯.೩೦ ಗಂಟೆಳೊಳಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದ ವ್ಯವಸ್ಥಾಪಕರಲ್ಲಿ ವರದಿ ಮಾಡಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ೦೮೨೨೬-೨೨೪೯೩೨ ಸಂಪರ್ಕಿಸುವಂತೆ ಇಲಾಖೆಯ ಸಹಾಯಕ ನಿರ್ದೇಶಕಕಿ ಆರ್. ಅನಿತಾ ತಿಳಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!