Mysore
22
overcast clouds

Social Media

ಭಾನುವಾರ, 14 ಜೂನ್ 2026
Light
Dark

ನಂಜನಗೂಡು: ಶ್ರೀಕಂಠೇಶ್ವರ ದೇಗುಲದಲ್ಲಿ ಮಾಜಿ‌ ಪ್ರಧಾನಿ ದೇವೇಗೌಡ ದಂಪತಿ ಪೂಜೆ

ನಂಜನಗೂಡು (ಮೈಸೂರು ಜಿಲ್ಲೆ): ಜೆಡಿಎಸ್ ವರಿಷ್ಠ, ಮಾಜಿ‌ ಪ್ರಧಾನಿ ಎಚ್.ಡಿ.ದೇವೇಗೌಡ ಪತ್ನಿ ಚನ್ನಮ್ಮ ಅವರೊಂದಿಗೆ ಇಲ್ಲಿನ ಶ್ರೀಕಂಠೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಗುರುವಾರ ವಿಶೇಷ ಪೂಜೆ ಸಲ್ಲಿಸಿದರು.

ರುದ್ರಾಭಿಷೇಕ ಮಾಡಿಸಿದರು. ತುಲಾಭಾರ ಸೇವೆ ಸಲ್ಲಿಸಿದರು. ಶಾಸಕರಾದ ಸಾ.ರಾ.ಮಹೇಶ್, ಅಶ್ವಿನ್ ಕುಮಾರ್, ವಿಧಾನಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ ಇದ್ದರು. ‘ಮೂರು ವರ್ಷದ ನಂತರ ನಂಜುಂಡೇಶ್ವರನ ದರ್ಶನಕ್ಕೆ ಬಂದಿದ್ದೇನೆ. ದಿನ ಚೆನ್ನಾಗಿದೆ ಅಂತ ಗೊತ್ತು ಮಾಡಿದ್ದರು’ ಎಂದರು.

‘ನಾನು ಚಿಕ್ಕ ಹುಡುಗನಿಂದಲೂ ನಂಜನಗೂಡಿಗೆ ಬರುತ್ತಿದ್ದೇನೆ. ಚಿಕ್ಕ ವಯಸ್ಸಿನಲ್ಲಿ ಕಿವಿ ಸಮಸ್ಯೆಯಾಗಿತ್ತು. ಎಷ್ಟು ವೈದ್ಯರಿಗೆ ತೋರಿಸಿದರೂ ಪ್ರಯೋಜನ ಆಗಿರಲಿಲ್ಲ. ನಂಜುಂಡೇಶ್ವರಲ್ಲಿ ಪ್ರಾರ್ಥಿಸಿದ ನಂತರ, ಗುಣವಾಗಿತ್ತು. ಭಕ್ತಿಯಿಂದ ಪ್ರಾರ್ಥನೆ ಮಾಡಿದರೆ ದೇವರು ಫಲ ಕೊಡುತ್ತಾನೆ’ ಎಂದು ದೇವೇಗೌಡ ಹೇಳಿದರು.

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!