Mysore
21
overcast clouds

Social Media

ಶುಕ್ರವಾರ, 07 ಆಗಸ್ಟ್ 2026
Light
Dark

4ರಂದು ಬೃಹತ್ ಆರೋಗ್ಯ ತಪಾಸಣಾ ಶಿಬಿರ

ಮೈಸೂರು: ಕೆ.ಎನ್.ಪುಟ್ಟಬುದ್ಧಿ ಫೌಂಡೇಷನ್, ಜಿಲ್ಲಾ ಸಂಚಾರಿ ನೇತ್ರ ಚಿಕಿತ್ಸಾ ಘಟಕ-ಕೆ.ಆರ್.ಆಸ್ಪತ್ರೆ, ಮೈಸೂರು, ಆರೋಗ್ಯಭಾರತಿ-ಮೈಸೂರು ಇವರ ಸಂಯುಕ್ತಾಶ್ರಯದಲ್ಲಿ ಮೈಸೂರು ತಾಲ್ಲೂಕಿನ ಕೀಳನಪುರದಲ್ಲಿ ಡಿ.೪ರಂದು ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ.

ಅಂದು ಬೆಳಿಗ್ಗೆ ೯ರಿಂದ ಮಧ್ಯಾಹ್ನ ೨ ಗಂಟೆಯವರೆಗೆ ಕೀಳನಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಆರೋಗ್ಯ ಶಿಬಿರ ನಡೆಯಲಿದ್ದು, ದೀರ್ಘ ತಲೆನೋವು, ರಕ್ತದೊತ್ತಡ, ಸಕ್ಕರೆ ಕಾಯಿಲೆ, ನಾಡಿಮಿಡಿತ, ಕಣ್ಣು-ಮೂಗು-ಕಿವಿ-ಗಂಟಲು, ಮಂಡಿನೋವು ಮುಂತಾದ ಕಾಯಿಲೆಗಳಿಗೆ ಉಚಿತ ತಪಾಸಣೆ, ಕಣ್ಣಿನ ಶಸ್ತ್ರ ಚಿಕಿತ್ಸೆ ಅಗತ್ಯ ಇರುವವರಿಗೆ ಚಿಕಿತ್ಸೆ ಮತ್ತು ಕಾರ್ಡ್ ವಿತರಣೆ, ಉಚಿತ ಔಷಧಿ ವಿತರಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ.

ನೇತ್ರ ತಜ್ಞರು, ಮಕ್ಕಳ ತಜ್ಞರು, ಹೃದಯ ಸಂಬಂಧಿ ತಜ್ಞರು, ಮಧುಮೇಹ ತಜ್ಞರು, ಪ್ರಸೂತಿ ತಜ್ಞರು, ಇಎನ್‌ಟಿ ತಜ್ಞರು, ಸಾಮಾನ್ಯ ತಪಾಸಣಾ ತಜ್ಞರು ತಪಾಸಣೆ ನಡೆಸಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಈ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕೆಂದು ವರುಣಾ ವಿಧಾನಸಭಾ ಕ್ಷೇತ್ರದ ಆಕಾಂಕ್ಷಿ ಶರತ್ ಪುಟ್ಟಬುದ್ಧಿ ಮನವಿ ಮಾಡಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!