ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಬುಧವಾರ ನಡೆದ ಹುಂಡಿಗಳ ಎಣಿಕೆ ಕಾರ್ಯದಲ್ಲಿ 2.59 ಕೋಟಿ ರೂ ಸಂಗ್ರಹವಾಗಿದೆ.

ಮಲೆಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಬುಧವಾರ ಬೆಳಿಗ್ಗೆ ಸಿಸಿ ಕ್ಯಾಮೆರಾ ಕಣ್ಗಾವಲು ಹಾಗೂ ಪೋಲಿಸ್ ಬಂದೋಬಸ್ತ್ ನಲ್ಲಿ ಎಣಿಕೆ ಕಾರ್ಯ ಪ್ರಾರಂಭ ಮಾಡಲಾಯಿತು ಎಣಿಕೆ ಕಾರ್ಯವು ಸಂಜೆ 10 ಗಂಟೆಯ ವರೆಗೂ ನಡೆಯಿತು.
ಈ ಬಾರಿ ಕಾರ್ತಿಕ ಮಾಸ ಹಾಗೂ ಸರ್ಕಾರಿ ರಜಾ ದಿನಗಳಂದು ರಾಜ್ಯದ ವಿವಿಧೆಡೆಯಿಂದ ಲಕ್ಷಾಂತರ ಜನರು ಆಗಮಿಸಿದ್ದರು ಕಳೆದ 34 ದಿನಗಳ ಅವಧಿಯಲ್ಲಿ 2 ಕೋಟಿ 59ಲಕ್ಷದ 31ಸಾವಿರದ 472 ರೂ 80 ಗ್ರಾಂ ಚಿನ್ನ ಹಾಗೂ 3.900 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ.
ಶ್ರೀ ಮಲೆ ಮಹದೇಶ್ವರಸ್ವಾಮಿ ಅಭಿವೃದ್ಧಿ ಪ್ರಾಧಿಕಾರದ ಉಪಕಾರ್ಯದರ್ಶಿ ಬಸವರಾಜು,ಲೆಕ್ಕಾಧೀಕ್ಷಕ ಪ್ರವೀಣ್ ಪಾಟೀಲ್ ದ್ವಿತೀಯ ದರ್ಜೆ ಸಹಾಯಕ ಮಹದೇವಸ್ವಾಮಿ ಸಿಬ್ಬಂದಿಗಳಾದ ಜನಾರ್ದನ್, ಮಲ್ಲಿಕಾರ್ಜುನಪ್ಪ, ನಾಗರಾಜು, ಮಾದೇಶ್ , ಎಸ್ ಬಿಐ ಬ್ಯಾಂಕ್ ವ್ಯವಸ್ಥಾಪಕರು ,ಮ,ಬೆಟ್ಟ ವೃತ್ತ ನಿರೀಕ್ಷಕ ಬಸವರಾಜು ಸೇರಿದಂತೆ ಪ್ರಾಧಿಕಾರದ ಸಿಬ್ಬಂದಿ ವರ್ಗದವರು ಹಾಜರಿದ್ದರು.



