Mysore
23
overcast clouds

Social Media

ಭಾನುವಾರ, 14 ಜೂನ್ 2026
Light
Dark

ಚಾಮರಾಜನಗರ :ಸಿಎಂ ಭೇಟಿ ಮುಂದೂಡಿಕೆ

ಚಾಮರಾಜನಗರ: ಡಿ.೧೨ ರಂದು ಹಮ್ಮಿಕೊಳ್ಳಲಾಗಿದ್ದ ಮುಖ್ಯಮಂತ್ರಿಗಳಿಂದ ಚಾ.ನಗರ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಸಮಾರಂಭವು ಡಿ.13ಕ್ಕೆ ಮುಂದೂಡಿಕೆಯಾಗಿದೆ.
ಗುಜರಾತ್‌ನಲ್ಲಿ ನಡೆಯಲಿರುವ ನೂತನ ಮುಖ್ಯಮಂತ್ರಿಯ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಬಸವರಾಜ ಬೊಮ್ಮಾಯಿ ಅವರು ಪಾಲ್ಗೊಳ್ಳುವ ಕಾರಣದಿಂದ ಮುಂದೂಡಲಾಗಿದೆ ಎಂದು ಹೇಳಲಾಗುತ್ತಿದೆ.
ಮುಖ್ಯಮಂತ್ರಿಯ ಸ್ವಾಗತಕ್ಕಾಗಿ ಜಿಲ್ಲಾಡಳಿತ ಮತ್ತು ಜಿಲ್ಲೆಯ ಬಿಜೆಪಿ ಪಕ್ಷದ ಮುಖಂಡರು ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದ್ದರು. ದಿಢೀರನೆ ಕಾರ್ಯಕ್ರಮವು ೧ ದಿನ ಮುಂದಕ್ಕೆ ಹೋಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಡಿ.೧೩ರಂದು ಬೆಳಿಗ್ಗೆ ೧೦.೩೦ ಗಂಟೆಗೆ ನಗರದ ಡಾ.ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಚಾಮರಾಜನಗರ ಮತ್ತು ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸುವರು. ನಂತರ ಕೆಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಮಧ್ಯಾಹ್ನದ ನಂತರ ಬೆಂಗಳೂರಿಗೆ ತೆರಳುವರು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈಗ ಸುರಿಯುತ್ತಿರುವ ಮಳೆ ಹೀಗೆೆಯೇ ಮುಂದುವರಿದರೆ ಮುಖ್ಯಮಂತ್ರಿಗಳ ಕಾರ್ಯಕ್ರಮವು ನಿಗದಿತ ಕಾರ್ಯಕ್ರಮಕ್ಕೆ ನಡೆಯುವುದು ಅನುಮಾನ. ಮಳೆ ನಿಂತರೆ ಕಾರ್ಯಕ್ರಮ ಜರುಗಲಿದೆ ಎಂದು ಹೇಳಲಾಗುತ್ತಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!