ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನ ಸುತ್ತೂರು ಶಾಖಾ ಮಠದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ,ವೀರಶೈವ ಲಿಂಗಾಯತ ಸಂಘಸಂಸ್ಥೆಗಳು ಹಾಗೂ ಬಸವ ಬಳಗಗಳ ಒಕ್ಕೂಟ ಆಯೋಜಿಸಿದ್ದ ಬಸಬ ಬಳಗಗಳ ಒಕ್ಕೂಟದ ರಜತ ಮಹೋತ್ಸವ ಸಮಾರಂಭದಲ್ಲಿ ಭಾಗಿಯಾಗಲು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಮೈಸೂರಿಗೆ ಭೇಟಿ ನೀಡಿದ್ದರು.
ನಗರಕ್ಕೆ ಆಗಮಿಸಿದ ವಿಜಯೇಂದ್ರ ಅವರನ್ನು ಪಕ್ಷದ ನಾಯಕರು ಬರ ಮಾಡಿಕೊಂಡರು. ಮುಡಾ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್, ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆ ಮಾಜಿ ಅಧ್ಯಕ್ಷ ಎಂ.ಅಪ್ಪಣ್ಣ,ರಾಜ್ಯ ಉಪಾಧ್ಯಕ್ಷ ಎಂ.ರಾಜೇಂದ್ರ ಮೊದಲಾದವರು ಹೂಗುಚ್ಛ ನೀಡಿ ಬರಮಾಡಿಕೊಂಡರು





