Mysore
21
overcast clouds

Social Media

ಶನಿವಾರ, 15 ಆಗಸ್ಟ್ 2026
Light
Dark

ಸಮರ್ಪಕ ಚರಂಡಿ ವ್ಯವಸ್ಥೆ ಕಲ್ಪಿಸುವಂತೆ ನಿವಾಸಿಗಳ ಅಗ್ರಹ

ಹನೂರು : ಪಟ್ಟಣದ 7ನೇ ವಾರ್ಡ್ ನ ಎಸ್‌ಟಿ ಸಮುದಾಯವಿರುವ ಆಂಜನೇಯ ಬಡಾವಣೆಯಲ್ಲಿ ಚರಂಡಿ ಕಾಮಗಾರಿಯನ್ನು ಅವೈಜ್ಞಾನಿಕವಾಗಿ ನಿರ್ಮಾಣ ಮಾಡುತ್ತಿದ್ದಾರೆ, ಕೂಡಲೇ ಸಮರ್ಪಕವಾಗಿ ಚರಂಡಿ ಕಾಮಗಾರಿಯನ್ನು ಮಾಡುವಂತೆ ನಿವಾಸಿಗಳು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮೂರ್ತಿರವರಿಗೆ ಮನವಿ ಸಲ್ಲಿಸಿದ್ದಾರೆ.

ಬಡಾವಣೆಯ ನಿವಾಸಿ ನಾಗಲಿಂಗಾಚಾರಿ ಮಾತನಾಡಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 7ನೇ ವಾರ್ಡಿನ ಆಂಜನೇಯ ಬಡಾವಣೆಯಲ್ಲಿ ಪರಿಶಿಷ್ಟ ವರ್ಗದ 25ಕ್ಕೂ ಹೆಚ್ಚು ಕುಟುಂಬಗಳಿದೆ. ಲಕ್ಷಾಂತರ ಅನುದಾನ ಬರುತಿದ್ದರು ಸಹ 7ನೇ ವಾರ್ಡಿಗೆ ಯಾವುದೇ ಅನುದಾನವನ್ನು ನೀಡುತ್ತಿಲ್ಲ, ಬಡಾವಣೆಯಲ್ಲಿ ಸಮರ್ಪಕ ಮೂಲಸೌಕರ್ಯ ಕಲ್ಪಿಸದೆ ಅನ್ಯಾಯ ವ್ಯಸಗುತ್ತಿದ್ದಾರೆ. ಈ ಬಗ್ಗೆ ವಾರ್ಡ್ ನ ಸದಸ್ಯರಿಗೂ ಹಲವು ಬಾರಿ ಮನವಿ ಮಾಡಿದ್ದರು ಸಹ ಯಾವುದೇ ಪ್ರಯೋಜನವಾಗಿಲ್ಲ, ಇರುವ ಚರಂಡಿಯಲ್ಲಿ ಕೊಳಚೆ ನೀರು ಸರಾಗವಾಗಿ ಮುಂದೆ ಹೋಗಲು ಸಾಧ್ಯವಾಗದೆ ಇರುವುದರಿಂದ ಸಾಂಕ್ರಮಿಕ ರೋಗದ ಭೀತಿಯಲ್ಲಿದ್ದೇವೆ ಮುಖ್ಯಾಧಿಕಾರಿಯಾದ ನೀವು ನಮ್ಮ ಸಮುದಾಯಕ್ಕೆ ನ್ಯಾಯ ಒದಗಿಸಿ ಸಮರ್ಪಕ ಚರಂಡಿ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಬಡಾವಣೆಯ ನಿವಾಸಿಗಳು ಹಾಜರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!