Mysore
29
overcast clouds

Social Media

ಶನಿವಾರ, 20 ಜೂನ್ 2026
Light
Dark

ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ

ತಿ.ನರಸೀಪುರ : ತಾಲ್ಲೂಕಿನ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ೨೦೨೨-೨೩ ನೇ ಸಾಲಿಗೆ ಕೃಷಿ ಹಾಗೂ ಕೃಷಿ ಸಂಬಂಧಿತ ಕ್ಷೇತ್ರಗಳಲ್ಲಿ ಸಾಧನೆಗೈದ ಕೃಷಿಕರಿಗೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕೃಷಿ, ಹೈನುಗಾರಿಕೆ, ಮೀನುಗಾರಿಕೆ ತೋಟಗಾರಿಕೆ, ರೇಷ್ಮೆ, ಕೃಷಿ ಅರಣ್ಯ ಈ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಿದ ರೈತರು ಅರ್ಜಿ ಸಲ್ಲಿಸಬಹುದಾಗಿದೆ. ಆಯ್ಕೆ ಸಮಿತಿಯ ತೀರ್ಮಾನದಂತೆ ಜಿಲ್ಲಾ ಮಟ್ಟದಲ್ಲಿ ಪ್ರತಿ ಕ್ಷೇತ್ರದಲ್ಲಿ ಇಬ್ಬರಂತೆ ಒಟ್ಟು ಐದು ಕ್ಷೇತ್ರಗಳಿಂದ ೧೦ ಜನರಿಗೆ ತಲಾ ೨೫ ಸಾವಿರ ಹಾಗೂ ತಾಲ್ಲೂಕು ಮಟ್ಟದಲ್ಲಿ ಪ್ರತಿ ಕ್ಷೇತ್ರದಲ್ಲಿ ಒಬ್ಬರಂತೆ ಐದು ಮಂದಿಗೆ ತಲಾ ೧೦ ಸಾವಿರ ರೂ. ಬಹುಮಾನ, ಶ್ರೇಷ್ಠ ಕೃಷಿಕ ಗೌರವಗಳೊಂದಿಗೆ ನೀಡಲಾಗುತ್ತದೆ.
ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಿಂದ ರೈತರು, ರೈತ ಮಹಿಳೆಯರು ಅರ್ಜಿ ನಮೂನೆಗಳನ್ನು ಪಡೆದು ಭರ್ತಿ ಮಾಡಿ ಡಿ. ೩೦ರೊಳಗಾಗಿ ಮತ್ತೆ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸುವಂತೆ ಇಲಾಖೆಯ ಪ್ರಕಟಣೆಉಲ್ಲಿ ಕೋರಲಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!