Mysore
22
light rain

Social Media

ಶನಿವಾರ, 19 ಸೆಪ್ಟೆಂಬರ್ 2026
Light
Dark

ಕಾರು-ದ್ವಿಚಕ್ರ ವಾಹನ ಡಿಕ್ಕಿ: ಮೂವರಿಗೆ ಗಾಯ

ಹನೂರು :ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ದ್ವಿಚಕ್ರ ವಾಹನದ ಮೂವರು ಸವಾರರು ಗಾಯಗೊಂಡಿದ್ದಾರೆ.

ತಾಲೂಕಿನ ಭದ್ರಯ್ಯನ ಹಳ್ಳಿ ಗ್ರಾಮದ ರಾಜು ಹರೀಶ್ ರಂಗಸ್ವಾಮಿ ಗಾಯಗೊಂಡ ವ್ಯಕ್ತಿಗಳಾಗಿದ್ದಾರೆ.

ಘಟನೆಯ ವಿವರ: ತಾಲೂಕಿನ ಭದ್ರಯ್ಯನಳ್ಳಿ ಗ್ರಾಮದಿಂದ ಕಾಮಗೆರೆ ಗ್ರಾಮಕ್ಕೆ ಕೂಲಿ ಕೆಲಸಕ್ಕೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಮೂವರಿಗೂ ಕಾಲು ಮುರಿದಿದೆ. ತಕ್ಷಣ ಮಾಹಿತಿ ತಿಳಿದ 112 ಪೊಲೀಸ್ ಸಿಬ್ಬಂದಿಗಳಾದ ಎ ಎಸ್ ಐ ಬಸವಣ್ಣ, ಮುಖ್ಯಪೇದೆ ಗಳಾದ ಸಿದ್ದೇಶ್ , ಲೋಕೇಶ್ ತಕ್ಷಣ 108 ಆಂಬುಲೆನ್ಸ್ ಮೂಲಕ ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಗೆ ದಾಖಲು ಮಾಡಿಸಿದ್ದಾರೆ. ಅಪಘಾತವಾದ ನಂತರ ಕಾರಿನ ಚಾಲಕ ಪರಾರಿಯಾಗಿದ್ದು ಈತನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!