Mysore
29
overcast clouds

Social Media

ಭಾನುವಾರ, 14 ಜೂನ್ 2026
Light
Dark

ಹೃದಯ ವೈಫಲ್ಯಕ್ಕೆ ತುತ್ತಾದ ನಾಲ್ವರಿಗೆ ಯಶಸ್ವಿ ಹೃದಯ ಕಸಿ

ನಾರಾಯಣ ಹೃದಯಾಲಯದ ತಜ್ಞ ವೈದ್ಯರಿಂದ ಚಿಕಿತ್ಸೆ

ಮೈಸೂರು: ಹೃದಯ ವೈಫಲ್ಯಕ್ಕೆ ತುತ್ತಾದ ನಾಲ್ವರಿಗೆ ನಗರದ ನಾರಾಯಣ ಹೃದಯಾಲಯದಲ್ಲಿ ಯಶಸ್ವಿ ಹೃದಯ ಕಸಿ ನೆರವೇರಿಸಲಾಗಿದ್ದು, ಎಲ್ಲರಂತೆ ಸಹಜವಾಗಿ ಆರೋಗ್ಯವಾಗಿದ್ದಾರೆ. ಆಸ್ಪತ್ರೆುಂಲ್ಲಿ ತೆರೆಯಲಾದ ಹೃದಯ ವೈಫಲ್ಯದ ಕ್ಲಿನಿಕ್ ಸಹಾಯದಿಂದ ಕೊನೆಯ ಹಂತದ ಹೃದ್ರೋಗದಿಂದ ಬಳಲುತ್ತಿರುವ ನಾಲ್ಕು ರೋಗಿಗಳನ್ನು ಉಳಿಸಲಾಗಿದೆ ಎಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ರವಿ ತಿಳಿಸಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಂದೀಶ್, ಕೇಶವ, ಕುಮಾರ ಮತ್ತು ಶಿವಕುಮಾರ್ ಎಂಬವರಿಗೆ ಹೃದ್ರೋಗ ಸಮಸ್ಯೆ ಎದುರಾಗಿತ್ತು. ಅವರು ಕೊನೆಯ ಹಂತದ ಹೃದಯ ವೈಫಲ್ಯದಿಂದ ಬಳಲುತ್ತಿದ್ದರು. ಇವರಿಗೆ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಹೃದಯ ವೈಫಲ್ಯ ಕ್ಲಿನಿಕ್‌ನಲ್ಲಿ ಚಿಕಿತ್ಸೆ ನೀಡಲಾಗಿತ್ತು ಮತ್ತು ಅವರಿಗೆ ಹೃದಯ ಕಸಿ ಚಿಕಿತ್ಸೆ ಪಡೆಯಲು ಸಲಹೆ ನೀಡಲಾಗಿತ್ತು. ವೈದ್ಯರ ಸಲಹೆ ಮೇರೆಗೆ ಎಂ.ಎಸ್.ರಾಮಯ್ಯ-ನಾರಾಯಣ ಹಾರ್ಟ್ ಸೆಂಟರ್‌ನಲ್ಲಿ ಕಸಿ ನಡೆಸಲಾಯಿತು ಎಂದು ಅವರು ತಿಳಿಸಿದರು.
ನಾರಾಉಣ ಹೆಲ್ತ್‌ನ ಹೆಸರಾಂತ ಹೃದಯ ಕಸಿ ತಜ್ಞ ಡಾ.ಯು.ಎಂ.ನಾಗಮಲ್ಲೇಶ್ ನೇತೃತ್ವದ ವೈದ್ಯಕೀಯ ತಜ್ಞರ ತಂಡದಿಂದ ಯಶಸ್ವಿ ಹೃದಉ ಕಸಿ ನಡೆಸಲಾಗಿದ್ದು, ಸಾಮಾನ್ಯರಂತೆ ಜೀವನ ನಡೆಸುತ್ತಿದ್ದಾರೆ ಎಂದು ಅವರು ವಿವರಿಸಿದರು.
ಹೃದಯ ಕಸಿ ತಜ್ಞ ಡಾ. ನಾಗಮಲ್ಲೇಶ್ ಮಾತನಾಡಿ, ಕರ್ನಾಟಕದಲ್ಲಿ ಸುಮಾರು ೧೫೦ರಿಂದ ೨೦೦ ಮಂದಿಗೆ ಹೃದಯ ಕಸಿ ಮಾಡಲಾಗುತ್ತಿದೆ. ಯೂರೋಪ್‌ನಲ್ಲಿ ಬ್ರೈನ್ ಡೆಡ್ ಆದವರಿಗೆ ಅಂಗಾಂಗ ದಾನ ಕಡ್ಡಾಯಗೊಳಿಸಲಾಗಿದೆ. ಆದರೆ, ಭಾರತದಲ್ಲಿ ಸ್ವಯಂಪ್ರೇರಿತರಾಗಿ ಅಂಗಾಂಗ ದಾನ ಮಾಡಬೇಕು ಎಂದರು.
ನಾರಾಉಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಹೃದ್ರೋಗ ತಜ್ಞ ಡಾ.ಕೇಶವಮೂರ್ತಿ ಮಾತನಾಡಿ, ಅನೇಕರಿಗೆ ಹೃದಯ ವೈಫಲ್ಯದ ಕುರಿತಾಗಲಿ ಅಥವಾ ಅಂಗಾಂಗ ದಾನದ ಬಗ್ಗೆ ಅರಿವು ಕಡಿಮೆ ಇದೆ. ಹೃದಯ ವೈಫಲ್ಯಕ್ಕೆ ಒಳಗಾದವರಿಗೆ ಸ್ವತಃ ಯಾವುದೇ ಕೆಲಸ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ. ಸುಸ್ತು, ಎದೆನೋವು, ತಲೆಸುತ್ತು, ಆಯಾಸ ಕಾಣಿಸಿಕೊಳ್ಳುತ್ತದೆ ಎಂದರು.
ಹೃದಯ ವೈಫಲ್ಯ ಎಂಬುದು ಕೊನೆಯ ಹಂತವಾಗಿದ್ದು, ಈ ಅವಸ್ಥೆಯಲ್ಲಿ 6 ತಿಂಗಳಿಂದ ಒಂದು ವರ್ಷದ ಅವಧಿಯವರೆಗೆ ಬದುಕಬಹುದಷ್ಟೆ. ಇಂತಹ ರೋಗಿಗಳಿಗೆ ನಾವು ಹೃದಯ ಕಸಿ ಮಾಡುತ್ತೇವೆ ಎಂದು ಹೇಳಿದರು.
ಶಸ್ತ್ರಚಿಕಿತ್ಸೆಗೆ ಒಳಗಾದ ನಂದೀಶ್, ಕೇಶವ, ಕುಮಾರ ಮತ್ತು ಶಿವಕುಮಾರ್ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!