ಮೈಸೂರು: ಮೈಸೂರು ಯೂನಿವರ್ಸಿಟಿ ಲೇಔಟ್ ನಿವಾಸಿಗಳು ನಮ್ಮ ಬಡಾವಣೆಗೆ ಕಬಿನಿ ಕುಡಿಯುವ ನೀರಿನ ಸೌಲಭ್ಯವನ್ನು ಕಲ್ಪಿಸುವಂತೆ ಶಾಸಕ ಜಿಟಿ ದೇವೇಗೌಡ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ.

ಇದಕ್ಕೆ ಪೂರಕವಾಗಿ ನೀರಿನ ಪೂರೈಕೆಗೆ ಅಗತ್ಯ ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ಶಾಸಕ ಜಿಟಿಡಿ ಸೂಚಿಸಿದರು. ಈ ಸಂದರ್ಭದಲ್ಲಿ ನಿವೃತ್ತ ಪ್ರಾಧ್ಯಾಪಕ ನಾಣಯ್ಯ ಸಂಘದ ನೇತೃತ್ವ ವಹಿಸಿದ್ದರು.





