Mysore
23
scattered clouds

Social Media

ಮಂಗಳವಾರ, 18 ಆಗಸ್ಟ್ 2026
Light
Dark

ಸಾಲಬಾಧೆ: ರೈತ ಸಾವಿಗೆ ಶರಣು

ಮದ್ದೂರು: ಸಾಲಬಾಧೆ ತಾಳಲಾರದೆ ರೈತನೋರ್ವ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲ್ಲೂಕಿನ ಸೋಮನಹಳ್ಳಿ ಜಿ.ಪಂ. ವ್ಯಾಪ್ತಿಯ ಹಳ್ಳಿಕೆರೆ ಗ್ರಾಮದಲ್ಲಿ ನಡೆದಿದೆ.
ತಾಲ್ಲೂಕಿನ ಹಳ್ಳಿಕೆರೆ ಗ್ರಾಮದ ಶಿವಲಿಂಗಯ್ಯ (೭೨) ಮೃತಪಟ್ಟ ರೈತನಾಗಿದ್ದು, ಇವರಿಗೆ ಪತ್ನಿ ಸಾವಿತ್ರಮ್ಮ, ಪುತ್ರ ವಿಜಯ್ ಹಾಗೂ ಪುತ್ರಿ ರೇಖಾ ಇದ್ದಾರೆ.
ಮೃತ ಶಿವಲಿಂಗಯ್ಯ ಅವರಿಗೆ ೧.೨ ಎಕರೆ ಜಮೀನಿದ್ದು, ಜೋಳ, ಹುರಳಿ ಇನ್ನಿತರೆ ಬೆಳೆಗಳನ್ನು ಬೆಳೆಯುತ್ತಿದ್ದರು. ಜಮೀನಿನಲ್ಲಿ ಬೇಸಾಯ ಮಾಡಲು ಬ್ಯಾಂಕ್ ಆಫ್ ಬರೋಡಾದಲ್ಲಿ ೧ ಲಕ್ಷ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ೫೫ ಸಾವಿರ ಹಾಗೂ ೩ ಲಕ್ಷಕ್ಕೂ ಅಧಿಕ ಕೈಸಾಲ ಮಾಡಿರುವುದಾಗಿ ತಿಳಿದುಬಂದಿದೆ.
ಸಾಲಕ್ಕೆ ಹೆದರಿದ ಶಿವಲಿಂಗಯ್ಯ ಡಿ.೧೯ರ ಸೋಮವಾರ ಕ್ರಿಮಿನಾಶಕ ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದರು. ಇವರಿಗೆ ಮದ್ದೂರು ತಾಲ್ಲೂಕು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿದ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಈ ಸಂಬoಧ ಮೃತನ ಪುತ್ರ ವಿಜಯ್ ನೀಡಿದ ದೂರಿನ ಮೇರೆಗೆ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!