Mysore
23
overcast clouds

Social Media

ಮಂಗಳವಾರ, 28 ಜುಲೈ 2026
Light
Dark

ಬಿಳಿಕೆರೆ ಬಳಿ ಬೆಳ್ಳಂಬೆಳಗ್ಗೆ ಆನೆ ದಾಳಿ: ಮಹಿಳೆ ಸಾವು

ಮೈಸೂರು: ಹೊಲದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರ ಮೇಲೆ ಬೆಳ್ಳಂಬೆಳಗ್ಗೆ ಆನೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ಹುಣಸೂರು ತಾಲೂಕಿನ ಚಿಕ್ಕಬೀಚನಹಳ್ಳಿಯಲ್ಲಿ ಶುಕ್ರವಾರ ನಡೆದಿದೆ.

ಆನೆ ದಾಳಿಗೆ ಸಿಲುಕಿ ಮಹಿಳೆ ಚಿಕ್ಕಮ್ಮ (60) ಮೃತಪಟ್ಟಿದ್ದು ನಂತರ ಇದೇ ಆನೆ ಬಿಳಿಕೆರೆ ಗ್ರಾಮದ ರವಿ ಎಂಬುವರ ಮೇಲೆ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿದೆ.

ಚಿಕ್ಕಬೀಚನಹಳ್ಳಿಯ ಸಿದ್ದೇಗೌಡ ಅವರು ಪತ್ನಿ ಚಿಕ್ಕಮ್ಮ ಅವರೊಂದಿಗೆ ಬೆಳಿಗ್ಗೆ ಹುರುಳಿ ಕಣದಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಇಬ್ಬರ ಮೇಲೆ ಆನೆ ದಾಳಿ ಮಾಡಿದೆ. ಸಿದ್ದೇಗೌಡ ಓಡಿಹೋಗಿ ತಪ್ಪಿಸಿಕೊಂಡಿದ್ದಾರೆ. ಆದರೆ ಚಿಕ್ಕಮ್ಮ ಅವರಿಗೆ ಅಲ್ಲಿಂದ ತಕ್ಷಣಕ್ಕೆ ಓಡಿಹೋಗಲು ಸಾಧ್ಯವಾಗದೆ ಆನೆ ಕಾಲಿಗೆ ಸಿಕ್ಕು ಮೃತಪಟ್ಟಿದ್ದಾರೆ. ಚಿಕ್ಕಬೀಚನಹಳ್ಳಿ ದಾಳಿ ಮಾಡಿದ ಬಳಿಕ ಬಿಳಿಕೆರೆ ಗ್ರಾಮದ ಬಳಿ ರವಿ ಎಂಬವರ ಮೇಲು ಆನೆ ದಾಳಿ ಮಾಡಿದೆ.

ಮೃತ ಕುಟುಂಬಸ್ಥರ ಮನೆಗೆ ಭೇಟಿ ಮಾಡಿರುವ ಶಾಸಕ ಜಿ.ಟಿ.ದೇವೆಗೌಡ ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. ಆನೆ ಸೆರೆ ಹಿಡಿಯುವಂತೆ ಅರಣ್ಯಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!