Mysore
21
overcast clouds

Social Media

ಶನಿವಾರ, 04 ಜುಲೈ 2026
Light
Dark

ದಕ್ಷಿಣ ವಲಯ ವ್ಯಾಪ್ತಿಯಲ್ಲಿ “ಪ್ರೇರಣಾ” ಪರೀಕ್ಷೆ

ಮೈಸೂರು: ಕನಕಗಿರಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಕೃಷ್ಣರಾಜ ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್ ರವರು ದಕ್ಷಿಣ ವಲಯ ವ್ಯಾಪ್ತಿಯ S.S.L.C ಮಕ್ಕಳಿಗೆ ನಡೆಸಲಾಗುತ್ತಿರುವ “ಪ್ರೇರಣಾ” ಪರೀಕ್ಷೆಯನ್ನು ಉದ್ಘಾಟಿಸಿದರು..ಈ ಸಂದರ್ಭದಲ್ಲಿ ಹಾಜರಿದ್ದ ಪೋಷಕರೊಡನೆ ಸಂವಾದ ನಡೆಸಿ 2023 ನೇ ಏಪ್ರಿಲ್ ನಲ್ಲಿ ನಡೆಯಲಿರುವ ವಾರ್ಷಿಕ ಪರೀಕ್ಷೆಯಲ್ಲಿ ಶೇ 100/% ಫಲಿತಾಂಶ ಪಡೆಯುವ ಬಗ್ಗೆ ಮಾರ್ಗದರ್ಶನ ನೀಡಿದರು.ಈ ಸಂದರ್ಭದಲ್ಲಿ ಎಲ್ಲಾ ಪೋಷಕರು ಮತ್ತುವಿದ್ಯಾರ್ಥಿಗಳಿಂದ ಶೇ 100% ಅಂಕಗಳನ್ನು ಗಳಿಸುವ ಬಗ್ಗೆ ಪ್ರಮಾಣ ಮಾಡಿಸಲಾಯಿತು.ಜಿಲ್ಲಾ ಉಪನಿರ್ದೇಶಕರಾದ ರಾಮಚಂದ್ರರಾಜೇ ಅರಸ್, ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಆರ್.ರಾಮಾರಾಧ್ಯ, ಬಿ.ಆರ್.ಸಿ.ಶ್ರೀಕಂಠ ಸ್ವಾಮಿ, ಶಿಕ್ಷಕರ ಸಂಘದ ಜಿಲ್ಲಾದ್ಯಕ್ಷ ಸೋಮೇಗೌಡ, ಬಿ.ಆರ್.ಪಿ ಶ್ರೀಕಂಠ ಶಾಸ್ತ್ರಿ, ಶಾಲಾ ಮುಖ್ಯ ಶಿಕ್ಷಕಿಕೆ.ಆರ್.ಉಷಾ ಹಾಗೂ ಎಲ್ಲಾ ಅನುಪಾಲನಾಧಿಕಾರಿಗಳು ಹಾಜರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!