Mysore
24
broken clouds

Social Media

ಬುಧವಾರ, 12 ಆಗಸ್ಟ್ 2026
Light
Dark

ಚಾಮುಂಡಿ ಬೆಟ್ಟದ ಉಳಿವಿಗೆ ಹೋರಾಟ ಅಗತ್ಯ

ಮೈಸೂರು: ಧಾರ್ಮಿಕ ಕ್ಷೇತ್ರ ಚಾಮುಂಡಿಬೆಟ್ಟದಲ್ಲಿ ಪ್ರಸಾದ ಯೋಜನೆ ಹೆಸರಿನಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ತಡೆದು, ಬೆಟ್ಟದ ಪಾವಿತ್ರತೆಯನ್ನು ಉಳಿಸಲು ಸರಣಿ ಹೋರಾಟ ನಡೆಸಲು ಚಾಮುಂಡಿ ಬೆಟ್ಟ ಉಳಿಸಿ ಹೋರಾಟ ಸಮಿತಿ ಸೇರಿದಂತೆ ಹಲವು ಸಂಘ-ಸಂಸ್ಥೆಗಳು ನಿರ್ಧಾರ ಕೈಗೊಂಡಿವೆ.

ನಗರದ ಜೆಎಲ್‌ಬಿ ರಸ್ತೆಯಲ್ಲಿರುವ ಇಂಜಿನಿಯರ್ ಸಂಸ್ಥೆ ಸಭಾಂಗಣದಲ್ಲಿ ಸಭೆ ಸೇರಿದ ಸಮಿತಿ ಸದಸ್ಯರು ಹಾಗೂ ಹಲವು ಸಂಘಟನೆಗಳ ಮುಖಂಡರು, ಚಾಮುಂಡಿಬೆಟ್ಟದ ಮೇಲೆ ನಡೆಯುತ್ತಿರುವ ಕಾಮಗಾರಿಗಳು ಇದೇ ರೀತಿ ಮುಂದುವರೆದರೆ ಬೆಟ್ಟದ ಪಾವಿತ್ರತೆ ಹಾಳಾಗುವುದರ ಜೊತೆಗೆ ಸಾಕಷ್ಟು ಹಾನಿಯುಂಟಾಗಲಿದೆ. ಹಾಗಾಗಿ,ಚಾಮುಂಡಿಬೆಟ್ಟವನ್ನು ಇರುವಂತೆೆಯೇ ಉಳಿಸಿಕೊಳ್ಳಲು ಹೋರಾಟ ಅಗತ್ಯ ಎಂದರು.

ದೇವಿಕೆರೆಗೆ ಹೊಸರೂಪ ನೀಡುತ್ತೇವೆಂದು ಜೆಸಿಬಿಗಳಿಂದ ಹೂಳೆತ್ತಿಸುತ್ತಿದ್ದಾರೆ. ಇದರಿಂದ ಬೆಟ್ಟ ಇನ್ನಷ್ಟು ಸಡಿಲವಾಗುವ ಸಾಧ್ಯತೆ ಇದೆ. ಚಾಮುಂಡಿಬೆಟ್ಟದ ಉಳಿವಿಗಾಗಿ ಪೂರ್ವ ತ ಇನ್ನೆರಡು ದಿನಗಳಿಂದ ಹೋರಾಟ ಆರಂಭಿಸಬೇಕಾಗಿದೆ. ಈ ನಿಟ್ಟಿನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುವ ಅಗತ್ಯವಿದೆ ಎಂದರು. ಮೈಸೂರು ಗ್ರಾಹಕ ಪರಿಷತ್ತಿನ ಸಂಸ್ಥಾಪಕ ಅಧ್ಯಕ್ಷ ಭಾಮಿ ಶೆಣೈ ಮಾತನಾಡಿ, ಚಾಮುಂಡಿ ಬೆಟ್ಟ ಉಳಿಸಬೇಕಾದರೆ ನಿರಂತರ ಹೋರಾಟ ಅವಶ್ಯವಾಗಿದೆ ಎಂದರು.

ಪ್ರೊ.ಕೆ.ಕಾಳಚೆನ್ನೇಗೌಡ ಮಾತನಾಡಿ, ಪ್ರಸಾದ ಯೋಜನೆ ಹೆಸರಿನಲ್ಲಿ ಚಾಮುಂಡಿದ ಮೇಲೆ ನಡೆಯುತ್ತಿರುವ ಕಟ್ಟಡ ನಿರ್ಮಾಣ ಕಾಮಗಾರಿಗಳು ನಿಲ್ಲಬೇಕು. ಜನಪ್ರತಿನಿಧಿ ಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸುವುದರಿಂದ ಯಾವುದೇ ಪ್ರಯೋಜನವಿಲ್ಲ ಅಧಿಕಾರಿಗಳಿಗೆ ಪರಿಸರ ಜ್ಞಾನ ಇರುವುದಿಲ್ಲ. ಆದ್ದರಿಂದ ಸಾಧ್ಯವಾದರೆ ಕಾನೂನು ಹೋರಾಟ ನಡೆಸಬೇಕು ಎಂದು ಸಲಹೆ ನೀಡಿದರು.

ಇತಿಹಾಸ ತಜ್ಞ ಪ್ರೊ.ರಂಗರಾಜು ಮಾತನಾಡಿ, ಧಾರ್ಮಿಕ ಕ್ಷೇತ್ರವಾದ ಚಾಮುಂಡಿ ಬೆಟ್ಟದ ಪಾವಿತ್ರ್ಯತೆ ಉಳಿಯಬೇಕಾದರೆ ಮೈಸೂರು ಬಂದ್ ಮಾದರಿಯಲ್ಲಿ ಪ್ರತಿಭಟನೆ ನಡೆಸಬೇಕು. ಬೆಟ್ಟದ ಇತಿಹಾಸ ಅರಿಯದೆ ಎಲ್ಲೆಡೆ ಕಾಂಕ್ರೀಟ್ ಕಟ್ಟಡಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ತೀವ್ರ ಬೇಸರ ವ್ಯಕ್ತಪಡಿಸಿದರು.

ಸಭೆಯಲ್ಲಿ ಮಾಜಿ ಮೇಯರ್ ಜಿ.ಎಲ್.ಭೈರಪ್ಪ, ಪರಿಸರ ಬಳಗದ ಪರಶು,ರಾಮೇಗೌಡ, ಪ್ರೊ.ಕಾಳೇಗೌಡ ನಾಗವಾರ, ಭಾನು ಮೋಹನ್ ಸೇರಿದಂತೆ ಕ್ಲೀನ್ ಮೈಸೂರು, ಮೈಸೂರು ಗ್ರಾಹಕ ಪರಿಷತ್ ಸೇರಿದಂತೆ ಹಲವು ಸಂಘ- ಸಂಸ್ಥೆಗಳ ಮುಖಂಡರು ಭಾಗವಹಿಸಿದ್ದರು

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!