Mysore
25
overcast clouds

Social Media

ಶುಕ್ರವಾರ, 07 ಆಗಸ್ಟ್ 2026
Light
Dark

ಹನೂರು : ಗಣರಾಜ್ಯೋತ್ಸವ ಆಚರಣೆ ಕುರಿತು ಪೂರ್ವಭಾವಿ ಸಭೆ

ಹನೂರು; ಪಟ್ಟಣದ ಲೋಕೋಪಯೋಗಿ ಅತಿಥಿ ಗೃಹದ ಸಭಾಂಗಣದಲ್ಲಿ ಗುರುವಾರ ಗಣರಾಜ್ಯೋತ್ಸವ ಆಚರಣೆ ಸಂಬಂಧ ವಿವಿಧ ಇಲಾಖೆಯ ಅಧಿಕಾರಿಗಳ ಪೂರ್ವಭಾವಿ ಸಭೆ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಶಾಸಕ ಆರ್.ನರೇಂದ್ರ ಮಾತನಾಡಿ, ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಪಟ್ಟಣದ ಶ್ರೀ ಮಹದೇಶ್ವರ ಕ್ರೀಡಾಂಗಣದಲ್ಲಿ ಆಚರಿಸಲು ತೀರ್ಮಾನಿಸಲಾಗಿದೆ. ಆದ್ದರಿಂದ ವಿವಿಧ ಇಲಾಖೆಯ ಅಧಿಕಾರಿಗಳು ಜಾವಬ್ದಾರಿಯನ್ನು ವಹಿಸಿಕೊಳ್ಳಬೇಕು. ಈ ಸಂಬಂಧ ಪೂರ್ವ ತಯಾರಿ ನಡೆಸಬೇಕು. ಕುಡಿಯುವ ನೀರು, ವಿದ್ಯಾರ್ಥಿಗಳು, ಸಾರ್ವಜನಿಕರ ಅಗತ್ಯಕ್ಕೆ ತಕ್ಕಂತೆ ಶಾಮಿಯಾನ ವ್ಯವಸ್ಥೆ ಮಾಡಬೇಕು. ಯಾವುದೇ ಲೋಪ ಆಗದಂತೆ ಕಾರ್ಯಕ್ರಮವನ್ನು ರೂಪುಗೊಳಿಸಬೇಕು. ಈ ದಿಸೆಯಲ್ಲಿ ಅಧಿಕಾರಿಗಳು ಸಂಘ ಸಂಸ್ಥೆಗಳ ಸಹಕಾರವನ್ನು ಪಡೆದುಕೊಳ್ಳಬೇಕು. ಅಲ್ಲದೇ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಸಾಧಕರನ್ನು ಸನ್ಮಾನಿಸಬೇಕು. ಈ ಮೂಲಕ ಗಣರಾಜೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಬೇಕು. ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪಪಂ ಉಪಾಧ್ಯಕ್ಷ ಗಿರೀಶ್, ತಹಸೀಲ್ದಾರ್ ಆನಂದಯ್ಯ, ಗ್ರೇಡ್ 2 ತಹಸೀಲ್ದಾರ್ ಧನಂಜಯ, ಬಿಇಒ ಶಿವರಾಜು, ಪಪಂ ಮುಖ್ಯಾಧಿಕಾರಿ ಮೂರ್ತಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ನವೀದ್ ಮಠದ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಗಂಗಾಧರ್, ಕೃಷಿ ಸಹಾಯಕ ನಿರ್ದೇಶಕಿ ಸುಂದರಮ್ಮ, ಹಾಗೂ ಇನ್ನಿತರರು ಹಾಜರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!