Mysore
25
overcast clouds

Social Media

ಶುಕ್ರವಾರ, 07 ಆಗಸ್ಟ್ 2026
Light
Dark

ಮೈಸೂರು : ನಾಳೆ ನೇರಳಕುಪ್ಪೆಯಲ್ಲಿ ಡಿಸಿ ಗ್ರಾಮ ವಾಸ್ತವ್ಯ

ಮೈಸೂರು: ಜಿಲ್ಲಾಧಿಕಾರಿಗಳ ನಡೆ ಗ್ರಾಮಗಳ ಕಡೆಗೆ ಗ್ರಾಮ ಭೇಟಿ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು ಜ.21ರಂದು ಹುಣಸೂರು ತಾಲ್ಲೂಕು ಹನಗೋಡು ಹೋಬಳಿಯ ನೇರಳಕುಪ್ಪೆ ಗ್ರಾಮದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಗ್ರಾಮಸ್ಥರು ತಮ್ಮ ಗ್ರಾಮಕ್ಕೆ ಸಂಬಂಧಿಸಿದಂತೆ ಸಮಸ್ಯೆಗಳಿದ್ದಲ್ಲಿ ನಾಡಕಚೇರಿ,ಉಪ ತಹಶೀಲ್ದಾರ್, ರಾಜಸ್ವ ನಿರೀಕ್ಷಕರಿಗೆ ಮನವಿ ಸಲ್ಲಿಸಿ ಪರಿಹಾರ, ಇತ್ಯರ್ಥಪಡಿಸಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಲೋಕನಾಥ್ ತಿಳಿಸಿದ್ದಾರೆ.

ಜಿಲ್ಲಾಧಿಕಾರಿಯವರು ಭೇಟಿ ನೀಡಲಿರುವ ತಾಲ್ಲೂಕನ್ನು ಹೊರತುಪಡಿಸಿ ಉಪ ವಿಭಾಗಾಧಿಕಾರಿಗಳು ಮತ್ತು ತಹಸಿಲ್ದಾರ್‌ಗಳು ಮೈಸೂರು ತಾಲ್ಲೂಕಿನ ವರುಣಾ-ಚಟ್ನಹಳ್ಳಿಪಾಳ್ಯ, ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕಿನ ಚುಂಚನಕಟ್ಟೆ ಹಾಗೂ ಮಾರಗೌಡನಹಳ್ಳಿ, ಎಚ್.ಡಿ.ಕೋಟೆ ತಾಲೂಕಿನ ಹಂಪಾಪುರ-ಹೊಳೆಹುಂಡಿ, ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ-ಹಲಗನಹಳ್ಳಿ, ನಂಜನಗೂಡು ತಾಲ್ಲೂಕಿನ ಕೌಲಂದೆ-ನೇರಳೆ, ತಿ.ನರಸೀಪುರ ತಾಲ್ಲೂಕಿನ ಬನ್ನೂರು-ಯಾಚೇನಹಳ್ಳಿ, ಸರಗೂರು ತಾಲ್ಲೂಕಿನ ಸರಗೂರು-ಹಾದನೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಯಶವಂತಪುರದಲ್ಲಿ ಕಾರ್ಯಕ್ರಮ ನಡೆಸಲಿದ್ದಾರೆ ಎಂದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!