Mysore
21
overcast clouds

Social Media

ಭಾನುವಾರ, 16 ಆಗಸ್ಟ್ 2026
Light
Dark

ವೆಸ್ಲಿ ಸೇತುವೆ ಬಳಿ ಸ್ವಾಮೀಜಿ ಮೃತ ದೇಹ ಪತ್ತೆ

ಚಾಮರಾಜನಗರ: ಕಾಣೆಯಾಗಿದ್ದ ಸ್ವಾಮೀಜಿ ಶವವಾಗಿ ಪತ್ತೆಯಾಗಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಸತ್ತೇಗಾಲದ ವೆಸ್ಲಿ ಸೇತುವೆ ಸಮೀಪ ನಡೆದಿದೆ. ಹನೂರು ತಾಲೂಕಿನ ಪಿ ಜಿ ಪಾಳ್ಯ ಗ್ರಾಮದಲ್ಲಿರುವ ಹೊಸ ಮಠದ ರಾಜಶೇಖರ ಸ್ವಾಮೀಜಿ (70) ಮೃತ ದುರ್ದೈವಿ. ಇಂದು ಕಾವೇರಿ ನದಿ ತೀರದಲ್ಲಿ ಅಪರಿಚಿತ ಮೃತದೇಹ ದೊರೆತಿದೆ ಎಂಬ ಮಾಹಿತಿ ಮೇರೆಗೆ ಕೊಳ್ಳೇಗಾಲ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಮೃತ ದೇಹವನ್ನು ನೀರಿನಿಂದ ಮೇಲಕ್ಕೆ ಎತ್ತಿಸಿದ ಬಳಿಕ ಸ್ವಾಮೀಜಿ ಮೃತಪಟ್ಟಿರುವುದು ಗೊತ್ತಾಗಿದೆ.

ಕೊಳ್ಳೇಗಾಲದ ಕಡೆ ಹೋಗಿ ಬರುತ್ತೇನೆಂದು ಹೋದವರು ಮಠಕ್ಕೆ ಹಿಂದಿರುಗಿರಲಿಲ್ಲ ಎಂದು ಸ್ವಾಮೀಜಿ ಸಹೋದರ ಪ್ರಕಾಶ್ ಎಂಬುವರು ದೂರು ಕೊಟ್ಟಿದ್ದು, ಅದರಲ್ಲಿ ಸ್ವಾಮೀಜಿ ಅನಾರೋಗ್ಯ ಪೀಡಿತರಾಗಿದ್ದರು ಹಾಗೂ ಹೊಟ್ಟೆನೋವಿನಿಂದಲೂ ಬಳಲುತ್ತಿದ್ದರು. ಜ.17 ರಂದು ಕೊಳ್ಳೇಗಾಲದ ಕಡೆ ಹೋಗಿ ಬರುತ್ತೇನೆಂದು ಹೋದವರು ಮಠಕ್ಕೆ ಹಿಂದಿರುಗಿರಲಿಲ್ಲ. ಎಲ್ಲ ಕಡೆ ಹುಡುಕಿದರೂ ಸಿಕ್ಕಿರಲಿಲ್ಲ.

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!