Mysore
20
scattered clouds

Social Media

ಶನಿವಾರ, 22 ಆಗಸ್ಟ್ 2026
Light
Dark

ಡಾ.ಹೆಚ್‌ಸಿಎಂಗೆ ಟಿಕೆಟ್ ನೀಡಲು ಒತ್ತಾಯ

ಮಲ್ಕುಂಡಿ: ಈ ಬಾರಿ ನಂಜನಗೂಡು ವಿಧಾನ ಸಭಾ ಕ್ಷೇತ್ರದಿಂದ ಮಾಜಿ ಸಚಿವ ಡಾ ಹೆಚ್.ಸಿ.ಮಹದೇವಪ್ಪ ಅವರಿಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನೀಡಬೇಕೆಂದು ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ತರಗನಹಳ್ಳಿ ನಂಜುಂಡಸ್ವಾಮಿ ಒತ್ತಾಯಿಸಿದ್ದಾರೆ.
ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಮಹದೇವಪ್ಪ ಅವರು ಲೋಕೋಪಯೋಗಿ ಇಲಾಖೆ ಸಚಿವರಾಗಿದ್ದಾಗ ಕ್ಷೇತ್ರಕ್ಕೆ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದು ಪ್ರತಿ ಗ್ರಾಮಗಳಿಗೂ ಕಾಂಕ್ರೀಟ್ ರಸ್ತೆ, 123 ಹಳ್ಳಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿ ರೈತರ ಪರವಾಗಿ ಕೆಲಸ ಮಾಡಿದ್ದಾರೆ. ರಾಜ್ಯದಲ್ಲಿ ಸಮಿಶ್ರ ಸರ್ಕಾರ ಇದ್ದಾಗ ನುಗು ಏತ ನೀರಾವರಿ ಯೋಜನೆಗೆ 80 ಕೋಟಿ ರೂ. ಅನುದಾನ ಬಿಡುಗಡೆ ಮಾಡಲು ಅವರೇ ಮೊದಲು ಕಾರಣ. ವೀರಶೈವ ಸಮುದಾಯ ನಿರ್ಮಾಣಕ್ಕೆ ಜಾಗ ಹಾಗೂ 2 ಕೋಟಿ ರೂ. ಅನುದಾನ ನೀಡಿದ್ದಾರೆ. ಎಲ್ಲಾ ಸಮುದಾಯದ ಜನರ ಜೊತೆ ಪ್ರೀತಿ ಗಳಿಸಿದ್ದಾರೆ. ಆದ್ದರಿಂದ ನಂಜನಗೂಡು ವಿಧಾನಸಭಾ ಕ್ಷೇತ್ರದಲ್ಲಿ ಡಾ.ಹೆಚ್.ಸಿ.ಮಹದೇವಪ್ಪ ಗೆಲುವು ಖಚಿತವಾಗಿದ್ದು, ಅವರಿಗೆ ಕಾಂಗ್ರೆಸ್ ಪಕ್ಷದ ವರಿಷ್ಠರು ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!