Mysore
22
overcast clouds

Social Media

ಗುರುವಾರ, 06 ಆಗಸ್ಟ್ 2026
Light
Dark

ಮನೆ ಬಾಗಿಲಿಗೆ ಪೌತಿಖಾತೆ ಹಕ್ಕು: ಆರ್.ಅಶೋಕ್

ಪೌತಿ ಖಾತೆದಾರರಿಗೆ ಕಿಸಾನ್ ಸಮ್ಮಾನ್‌  ಆರ್ಥಿಕ ಸೌಲಭ್ಯಗಳು

ಬೆಂಗಳೂರು: ಪೌತಿಖಾತೆ ಆಂದೋಲನದ ಮೂಲಕ ಆಸ್ತಿಯ ಖಾತೆ ಹಕ್ಕುಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಆಡಳಿತಾತ್ಮಕ ಮಹತ್ವದ ಸುಧಾರಣೆ ಬಂದಿದೆ. ಪೌತಿ ಖಾತೆ ಹೊಂದಿದ ಖಾತೆದಾರಿಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್‌  ಯೋಜನೆಯಡಿ ದೊರೆಯುವ ಆರ್ಥಿಕ ಸೌಕರ್ಯಗಳನ್ನು ಕೂಡ ತ್ವರಿತವಾಗಿ ತಲುಪಿಸಬೇಕು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.

ಹೊಸಕೋಟೆ ತಾಲ್ಲೂಕಿನ ಜಡಿಗೇನಹಳ್ಳಿಯಲ್ಲಿ ಭಾನುವಾರ ಬೆಳಿಗ್ಗೆ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ್ದ ಪೌತಿಖಾತೆ ಆಂದೋಲನದಲ್ಲಿ ಖಾತೆ ಪತ್ರಗಳನ್ನು ವಿತರಿಸಿ ಅವರು ಮಾತನಾಡಿದರು,
ರೈತ ಕುಟುಂಬಗಳು ತಮ್ಮ ಆಸ್ತಿಗಳನ್ನು ಭಾಗ ಮಾಡಿಕೊಳ್ಳುವುದು ಈ ಹಿಂದೆ ಬಹಳ ಸವಾಲಿನ ಕಾರ್ಯವೆನಿಸತು. ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ, ಪೌತಿ ಖಾತೆ ಆಂದೋಲನದ ಪರಿಣಾಮವಾಗಿ ಜನರ ಮನೆ ಬಾಗಿಲಿಗೆ ದಾಖಲೆಗಳು ಬರುವಂತಾಗಿದೆ. ಆಸ್ತಿಯಲ್ಲಿ ಗಂಡು ಹಾಗೂ ಹೆಣ್ಣು ಮಕ್ಕಳಿಗೆ ಸಮಾನ ಹಕ್ಕುಗಳು ಇವೆ ಎಂದರು.

ಯಾವುದೇ ಅನಗತ್ಯ ತಂಟೆ, ತಕರಾರುಗಳಿಗೆ ಅವಕಾಶವಾಗದಂತೆ ನ್ಯಾಯಯುತ ಮಾರ್ಗದಲ್ಲಿ ಆಸ್ತ ವಿಭಜನೆ ಮಾಡಿಕೊಂಡು ಪ್ರತಿಯೊಬ್ಬರು ತಮ್ಮ ಪಾಲಿನ ಖಾತೆಗಳನ್ನು ಹೊಂದಿದರೆ, ಸರ್ಕಾರದ ವಿವಿಧ ಯೋಜನೆಗಳು ಮತ್ತು ಸಾಲ ಸೌಲಭ್ಯಗಳನ್ನು ಪಡೆಯಲು ಸುಲಭವಾಗುತ್ತದೆ ಎಂದು ಹೇಳಿದರು.

ಪೌತಿಖಾತೆಗೆ ಅರ್ಜಿ ಸಲ್ಲಿಸಿದ್ದ 17 ಕುಟುಂಬಗಳಿಗೆ ಸಚಿವರು ಆಸ್ತಿಖಾತೆ ದಾಖಲೆಗಳನ್ನು ವಿತರಿಸಿದರು. ನಂತರ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!