Mysore
20
overcast clouds

Social Media

ಶನಿವಾರ, 22 ಆಗಸ್ಟ್ 2026
Light
Dark

ಇಎಸ್‌ಐ ಯಥಾಸ್ಥಿತಿ ಮುಂದುವರಿಸಲು ಆಗ್ರಹ

ಮೈಸೂರು: ಕಾರ್ಮಿಕ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಮಿಕರ ರಾಜ್ಯ ವಿಮಾವ ಯೋಜನೆಯ ವೈದ್ಯಕೀಯ ಸೇವೆಗಳ ಇಲಾಖೆಯನ್ನು ಸರ್ಕಾರ ಸೊಸೈಟಿಯಾಗಿ ಪರಿವರ್ತಿಸಲು ಮುಂದಾಗಿರುವುದಕ್ಕೆ ನಮ್ಮ ವಿರೋಧವಿದೆ ಎಂದು ರಾಷ್ಟ್ರೀಯ ಮಜ್ದೂರ್ ಕಾಂಗ್ರೆಸ್‌ನ ಜಿಲ್ಲಾ ಸಂಘಟನಾ ಕಾರ್ಯದರ್ಶಿ ವಿ. ವೆಂಕಟೇಶ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿವಾದಾರರು ಮತ್ತು ಅವರ ಕುಟುಂಬದವರಿಗೆ ಉನ್ನತ ವೈದ್ಯಕೀಯ ಸೌಲಭ್ಯ ದೊರೆಯುವುದಿಲ್ಲ. ಜೊತೆಗೆ ಸಿಬ್ಬಂದಿ ಮತ್ತು ಅಧಿಕಾರಿ ವರ್ಗದ ಹಿತದೃಷ್ಟಿಯಿಂದ ಕೈಗೊಂಡಿರುವ ತೀರ್ಮಾನ ಸರಿಯಲ್ಲ. ಕಾರ್ಮಿಕರಿಂದ ವಾರ್ಷಿಕ 2,100 ಕೋಟಿ ರೂ., ಸಂಗ್ರಹಿಸಿ ಕಾರ್ಮಿಕರ ಮಾಸಿಕ ವಂತಿಕೆಯಿಂದ ನಡೆಯುವ ಇಲಾಖೆಯನ್ನು ಸೊಸೈಟಿಯನ್ನಾಗಿ ಮಾಡಿದಲ್ಲಿ ಪ್ರಮುಖ ಇಲಾಖೆಯೊಂದು ರಾಜ್ಯ ಸರ್ಕಾರದ ಕೈತಪ್ಪಿದಂತಾಗುತ್ತದೆ ಎಂದು ಬೇಸರಿಸಿದರು.
ಅಲ್ಲದೆ, ಆಂಧ್ರಪ್ರದೇಶ, ತಮಿಳುನಾಡು ಮತ್ತು ಕೇರಳ ರಾಜ್ಯಗಳು ಸೊಸೈಟಿ ಮಾಡುವ ಪ್ರಸ್ತಾವನೆಯನ್ನು ತಿರಸ್ಕರಿಸಿವೆ. ಹೀಗಾಗಿ ಈ ಪ್ರಸ್ತಾವನೆಯನ್ನು ಕೈ ಬಿಟ್ಟು ರಾಜ್ಯಸರ್ಕಾರದಡಿಯಲ್ಲಿಯೇ ಮುಂದುವರಿಸಬೇಕೆಂದು ಆಗ್ರಹಿಸಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!