ಕೊಳ್ಳೇಗಾಲ: ನೂತನ ಪೊಲೀಸ್ ಸರ್ಕಲ್ ಇನ್ಸ್ಪೆಕ್ಟರ್ ಆಗಿ ಎನ್.ಜಿ. ಕೃಷ್ಣಪ್ಪ ಅವರು ಅಧಿಕಾರ ಸ್ವೀಕರಿಸಿದರು.
ಈ ಹಿಂದೆ ಇದ್ದ ವೃತ್ತನಿರೀಕ್ಷಕ ಶಿವರಾಜ್ ಆರ್ ಮುಧೋಳ್ ಅವರು ವರ್ಗಾವಣೆಗೊಂಡ ಬಳಿಕ ತೆರವಾಗಿದ್ದ ಸ್ಥಾನಕ್ಕೆ ಕೃಷ್ಣಪ್ಪ ಅವರನ್ನು ಸರ್ಕಾರ ನೇಮಕ ಮಾಡಿದ್ದು, ಅಧಿಕಾರ ವಹಿಸಿಕೊಂಡಿದ್ದಾರೆ.
ನೂತನ ಇನ್ಸ್ಪೆಕ್ಟರ್ ಅವರನ್ನು ಶಾಸಕ ಎನ್.ಮಹೇಶ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಡಾ.ಎಸ್.ದತ್ತೇಶ್ ಕುವಾರ್, ವಾನಸ ಶಿಕ್ಷಣ ಸಂಸ್ಥೆ ಅಧ್ಯಕ್ಷ ಎಸ್.ನಾಗರಾಜು ಅವರು ಸ್ವಾಗತಿಸಿದರು.





