ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ ಅಕ್ರಮವಾಗಿ ಕೇರಳದಿಂದ ಲಾಟರಿ ತಂದು ಮಾರಲಾಗುತ್ತಿದ್ದರೂ ನಿಯಂತ್ರಿಸುವಲ್ಲಿ ಪಟ್ಟಣ ಪೊಲೀಸರು ವಿಫಲವಾಗಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಪಟ್ಟಣದಲ್ಲಿ ಕಣ್ಣೆದುರಿಗೇ ಅಕ್ರಮ ಲಾಟರಿ ಮಾರಾಟ ನಡೆಯುತ್ತಿದೆ. ಇದರಿಂದಾಗಿ ಕೂಲಿ ಕಾರ್ಮಿಕರ ಬದುಕು ಬೀದಿಗೆ ಬೀಳುತ್ತಿದೆ. ಆದ್ದರಿಂದ ಬೇರೆ ರಾಜ್ಯದ ಲಾಟರಿಯನ್ನು ನಮ್ಮ ತಾಲ್ಲೂಕಿನಲ್ಲಿ ತಂದು ಮಾರಾಟ ಮಾಡುವುದನ್ನು ತಡೆಯಬೇಕು ಎಂದು ಜನರು ಒತ್ತಾಯಿಸಿದ್ದಾರೆ.
ತಾಲ್ಲೂಕಿನಲ್ಲಿ ಅಕ್ರಮ ಕೇರಳ ಲಾಟರಿ ಸಾಗಣೆ ಹೆಚ್ಚಾಗಿದೆ. ಕೂಡಲೆ ಅಕ್ರಮ ಲಾಟರಿ ಸಾಗಾಟ ಮತ್ತು ಮಾರಾಟಕ್ಕೆ ಕಡಿವಾಣ ಹಾಕಬೇಕು ಎಂದು ಮಣಿಕಂಠ ಒತ್ತಾಯಿಸಿದ್ದಾರೆ.





