Mysore
22
overcast clouds

Social Media

ಗುರುವಾರ, 06 ಆಗಸ್ಟ್ 2026
Light
Dark

ಅನಾರೋಗ್ಯದಿಂದ ವಿಚಾರಣಾಧೀನ ಕೈದಿ ಸಾವು

ಮೈಸೂರು: ನಗರದ ಕೇಂದ್ರ ಕಾರಾಗೃಹದ ವಿಚಾರಣಾಧೀನ ಕೈದಿಯೊಬ್ಬರು ಅನಾರೋಗ್ಯದಿಂದ ಕೆ.ಆರ್.ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಚೆಕ್ ಬೌನ್ಸ್ ಪ್ರಕರಣದಲ್ಲಿ ವಿಚಾರಣಾಧೀನ ಕೈದಿಯಾಗಿ ಜೈಲು ಸೇರಿದ್ದ ಕುಂಬಾರಕೊಪ್ಪಲಿನ ನಿವಾಸಿ ನರಸಿಂಹ(40) ಮೃತಪಟ್ಟವರು. ಚೆಕ್ ಬೌನ್ಸ್ ಪ್ರಕರಣದ ಆರೋಪದ ಮೇಲೆ ಇವರನ್ನು ವಿವಿ ಪುರಂ ಠಾಣೆ ಪೊಲೀಸರು ಬಂಧಿಸಿ ಜನವರಿಯಲ್ಲಿ ವಿಚಾರಣಾಧೀನ ಕೈದಿಯಾಗಿ ಜೈಲಿಗೆ ಕಳುಹಿಸಿದ್ದರು. ಕಳೆದ ಎರಡು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ನರಸಿಂಹರಿಗೆ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಹು ಅಂಗಾಂಗ ವೈಫಲ್ಯ ಮತ್ತು ಜಾಂಡೀಸ್ ನಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಕುಟುಂಬಸ್ಥರಿಗೆ ನೀಡಲಾಗಿದೆ. ಮಂಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!