ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಕಳ್ಳಬೇಟೆಗಾರರ ನಡುವೆ ಗುಂಡಿನ ಚಕಮಕಿ ನಡೆದಿರುವ ಆತಂಕಕಾರಿ ಘಟನೆ ನಡೆದಿದೆ.
ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಡಿ ಪಾಲಾರ್ ಎಂಬಲ್ಲಿ ಜಿಂಕೆಯನ್ನು ಬೇಟೆಯಾಡಿ ತೆರಳುತ್ತಿದ್ದ ನಾಲ್ವರು ಕಳ್ಳಬೇಟೆಗಾರರು ಹಾಗೂ ಮೂವರು ಅರಣ್ಯ ಇಲಾಖೆಯ ಸಿಬ್ಬಂದಿಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಬೇಟೆಗಾರರು ನದಿಯ ಮೂಲಕ ಪರಾರಿಯಾಗಿದ್ದಾರೆ.
ಬೇಟೆಗಾರರ ತಲೆ ಬ್ಯಾಟರಿಗಳು ಪತ್ತೆಯಾಗಿದ್ದು, ಈ ಸಂಬಂಧ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆಂದು ಎಸಿಎಫ್ ಅಂಕರಾಜು ಮಾಹಿತಿ ನೀಡಿದ್ದಾರೆ.





