Mysore
26
overcast clouds

Social Media

ಶುಕ್ರವಾರ, 07 ಆಗಸ್ಟ್ 2026
Light
Dark

ಮೈಸೂರಿನಲ್ಲಿ ಶಿವರಾತ್ರಿ ಸಂಭ್ರಮ: ತ್ರಿನೇಶ್ವರನಿಗೆ ಚಿನ್ನದ ಮುಖವಾಡ ಧರಿಸಿ ವಿಶೇಷ ಪೂಜೆ

ಮೈಸೂರು: ನಗರದ ತ್ರಿನೇಶ್ವರನಿಗೆ ಚಿನ್ನದ ಮುಖವಾಡ ಧರಿಸಿ ವಿಶೇಷ ಪೂಜೆ ನೆರವೇರಿಸಲಾಯಿತುಮೈಸೂರು : ಮಹಾಶಿವರಾತ್ರಿಯ ನಿಮಿತ್ತ ಇಂದು ಬೆಳಗ್ಗೆಯಿಂದಲೇ ಮೈಸೂರು ಜಿಲ್ಲೆಯ ಶಿವ ದೇವಾಲಯಗಳಲ್ಲಿ ವಿಶೇಷ ಪೂಜೆ ಆರಂಭವಾಗಿದೆ. ಅರಮನೆ ಆವರಣದಲ್ಲಿರುವ ತ್ರಿನೇಶ್ವರ ಸ್ವಾಮಿಗೆ 11 ಕೆಜಿ ತೂಕದ ಚಿನ್ನದ ಮುಖವಾಡದ ಕೊಳಗವನ್ನು ಹಾಕಿ ವಿಶೇಷ ಪೂಜೆ ಸಲ್ಲಿಸಲಾಯಿತು. ಭಕ್ತಾದಿಗಳು ಬೆಳಗ್ಗೆಯಿಂದಲೇ ತ್ರಿನೇಶ್ವರನ ದರ್ಶನಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ.ದೇಶಾದ್ಯಂತ ಇಂದು ಮಹಾಶಿವರಾತ್ರಿ ಸಂಭ್ರಮ. ಮುಂಜಾನೆಯಿಂದಲೇ ಭಕ್ತರು ಶಿವನ ದೇವಾಲಯಗಳಿಗೆ ಆಗಮಿಸಿ ಪೂಜೆ ಸಲ್ಲಿಸುತ್ತಿದ್ದಾರೆ. ಉಪವಾಸ ಹಾಗೂ ಜಾಗರಣೆ ಈ ದಿನದ ವಿಶೇಷವಾಗಿದ್ದು, ಮೈಸೂರು ಜಿಲ್ಲೆಯಲ್ಲಿ ಸಹ ಶಿವರಾತ್ರಿ ಸಂಭ್ರಮ ಜೋರಾಗಿದೆ. ನಗರದ ಅಂಬಾ ವಿಲಾಸ ಅರಮನೆಯ ಆವರಣದಲ್ಲಿರುವ ಇತಿಹಾಸ ಪ್ರಸಿದ್ಧ ತ್ರಿನೇಶ್ವರ ಸ್ವಾಮಿಗೆ ಮಹಾರಾಜರು ನೀಡಿರುವಂತಹ 11 ಕೆಜಿ ತೂಕದ ಬಾಲ ಶಿವನ ಚಿನ್ನದ ಮುಖವಾಡದ ಕೊಳಗವನ್ನು ಬೆಳಗ್ಗೆಯೇ ದೇವರಿಗೆ ಧರಿಸಿ ಪೂಜೆ ಸಲ್ಲಿಸಲಾಯಿತು. ವರ್ಷದಲ್ಲಿ ಶಿವರಾತ್ರಿಯ ದಿನದಂದು ಮಾತ್ರ ಈ ದರ್ಶನ ಭಾಗ್ಯ ಶಿವಭಕ್ತರಿಗೆ ಸಿಗುವುದು ವಿಶೇಷ.

ಶಿವರಾತ್ರಿಯಂದು ನಡೆಯುವ ವಿಶೇಷ ಪೂಜೆಗಳು : ಶಿವರಾತ್ರಿ ದಿನದಂದು ಶಿವನ ದರ್ಶನ ಪಡೆದು ಅರ್ಚನೆ ಮಾಡಿದರೆ ಪುಣ್ಯ ಫಲಗಳು ಸಿಗುತ್ತವೆ ಎಂಬುದು ಶಿವಭಕ್ತರ ನಂಬಿಕೆ. ಈ ಹಿನ್ನೆಲೆಯಲ್ಲಿ ಮೈಸೂರಿನ ಅರಮನೆ ಆವರಣದಲ್ಲಿ ಇರುವ ತ್ರಿನೇಶ್ವರ ಸ್ವಾಮಿ ದೇವಾಲಯದಲ್ಲಿ ಬೆಳಗ್ಗೆ 4:30 ಯಿಂದಲೇ ವಿಶೇಷ ಚಿನ್ನದ ಕೊಳಗವನ್ನ ಧಾರಣೆ, ಗಣಪತಿ ಪೂಜೆ, ರುದ್ರಾಭಿ

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!