Mysore
20
overcast clouds

Social Media

ಶುಕ್ರವಾರ, 21 ಆಗಸ್ಟ್ 2026
Light
Dark

ಗಾಂಧಿಪ್ರತಿಮೆ ಬಳಿ ಮಹಿಳೆ ಏಕಾಂಗಿ ಪ್ರತಿಭಟನೆ

ಮೈಸೂರು: ಗಂಡ-ಹೆಂಡತಿ ಇಬ್ಬರೂ ಸೇರಿಕೊಂಡು ವರುಣ ವ್ಯಾಪ್ತಿಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂದು ವರುಣ ಪೊಲೀಸ್ ಠಾಣೆಗೆ ದೂರು ನೀಡಿ ವರ್ಷ ಕಳೆದರೂ ಪೊಲೀಸರು ಯಾವುದೇ ಕ್ರಮ ಜರುಗಿಸಿಲ್ಲ ಎಂದು ಎಂ.ಚೌಡಯ್ಯ ಅವರ ಸಾಮಾಜಿಕ, ಶೈಕ್ಷಣಿಕ ಚಾರಿಟಬಲ್ ಇಂಟರ್ ನ್ಯಾಷನಲ್ ಟ್ರಸ್ಟ್‌ನ ಸಂಸ್ಥಾಪಕ ಅಧ್ಯಕ್ಷರಾದ ಸರ್ವಮಂಗಳ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು.
ನಗರದ ನ್ಯಾಯಾಲಯದ ಮುಂಭಾಗದ ಗಾಂಧಿ ಪುತ್ತಳಿ ಬಳಿ ಏಕಾಂಗಿಯಾಗಿ ಪ್ರತಿಭಟನೆ ಆರಂಭಿಸಿದ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮತ್ತು ಪೊಲೀಸ್ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ವರುಣ ಠಾಣಾ ವ್ಯಾಪ್ತಿಯಲ್ಲಿ ಪತಿ-ಪತ್ನಿಯರಿಬ್ಬರೂ ಸೇರಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂದು ಕಳೆದ ವರ್ಷವೇ ವರುಣ ಪೊಲೀಸ್ ಠಾಣೆಗೆ ದೂರು ನೀಡಿದ್ದೆ. ಆದರೆ, ಪೊಲೀಸರು ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಸಂಬಂಧ ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಮತ್ತು ಬೆಂಗಳೂರಿನಲ್ಲಿಯೂ ಸುದ್ದಿಗೋಷ್ಠಿ ಮಾಡಿದ್ದೇನೆ. ಆದರೂ ಕ್ರಮ ಜರುಗಿಸಿಲ್ಲ ಎಂದು ದೂರಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!